ಗುಂಡೀರ್ ಗುಡ್ಡೆಯಲ್ಲಿ ತಡೆಗೋಡೆ ಕುಸಿತ ➤ ಅಪಾಯದಂಚಿನಲ್ಲಿ ಮನೆಗಳು

(ನ್ಯೂಸ್ ಕಡಬ) newskadaba.com ಮೂಡುಬಿದಿರೆ, ಸೆ. 12. ತೆಂಕಮಿಜಾರು ಗ್ರಾಮದ ಗುಂಡೀರ್ ಗುಡ್ಡೆಯಲ್ಲಿ ಮನೆಯೊಂದರ ಆವರಣಗೋಡೆ ಭಾರೀ ಮಳೆಗೆ ಕುಸಿದಿದ್ದು, ಎರಡು ಮನೆಗಳು ಅಪಾಯದಂಚಿನಲ್ಲಿದೆ.

 

ಮಯ್ಯದ್ದಿ ಅವರ ಜಾಗದ ಆವರಣಗೋಡೆ ಬಿದ್ದಿದ್ದು, ಪಕ್ಕದಲ್ಲಿರುವ ಸಿರಾಜುದ್ದೀನ್ ಎಂಬವರ ಮನೆ ಕೂಡ ಅಪಾಯದ ಅಂಚಿನಲ್ಲಿದೆ. ಮಳೆಯಿಂದ ಕೃಷಿ ಭೂಮಿಗೂ ಹಾನಿಯಾಗಿದೆ. ಮಾಜಿ ಸಚಿವ ಕೆ.ಅಭಯಚಂದ್ರ ಜೈನ್, ಪೊಲೀಸ್ ಉಪನಿರೀಕ್ಷಕ ವಿನಾಯಕ, ಗ್ರಾಮಕರಣಿಕರಾದ ದೀಪಿಕಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

 

 

Also Read  ಬೆಳ್ತಂಗಡಿ: ಹೆದ್ದಾರಿ-73ರ ಬಳಿ ರಸ್ತೆಗೆ ಉರುಳಿದ ಮರ ➤ ಸಂಚಾರ ಅಸ್ತವ್ಯಸ್ತ

error: Content is protected !!
Scroll to Top