ಎಸ್ಡಿಪಿಐ ಕಾವಲಕಟ್ಟೆ ವಲಯ ಸಮಿತಿ ವತಿಯಿಂದ ಸದಸ್ಯತ್ವ ಅಭಿಯಾನ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 12. ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದೂಮಲಿಕೆ, ಕಾವಳಕಟ್ಟೆ ಇದರ ವತಿಯಿಂದ ಪಕ್ಷಕ್ಕೆ ಹೊಸ ಕಾರ್ಯಕರ್ತರ ಸೇರ್ಪಡೆ ಕಾರ್ಯಕ್ರಮವು ದೂಮಲಿಕೆಯಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿ ಪಿ ಐ ದೂಮಲಿಕೆ ಬ್ರಾಂಚ್ ಅಧ್ಯಕ್ಷರಾದ ಮುಸ್ತಫಾ ಕಾವಳಕಟ್ಟೆ ವಹಿಸಿದ್ದರು.

ಎಸ್ಡಿಪಿಐ ದ.ಕ ಜಿಲ್ಲಾ ಕಾರ್ಯದರ್ಶಿಯಾದ ಇಕ್ಬಾಲ್ ಬೆಳ್ಳಾರೆ, ಬಂಟ್ವಾಳ ವಿಧಾನಸಭಾ ಕ್ಷೇತ್ರ ಅಧ್ಯಕ್ಷರಾದ ಯೂಸುಫ್ ಆಲಡ್ಕ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಸುಮಾರು 44 ರಷ್ಟು ಹೊಸ ಕಾರ್ಯಕರ್ತರು ಪಕ್ಷದ ಸಿದ್ಧಾಂತವನ್ನು ಒಪ್ಪಿಕೊಂಡು ಸದಸ್ಯತ್ವವನ್ನು ಸ್ವೀಕರಿಸಿದರು.

ವೇದಿಕೆಯಲ್ಲಿ ಎಸ್ ಡಿ ಪಿ ಐ ವಲಯ ಅಧ್ಯಕ್ಷರಾದ ಅಬೂಬಕ್ಕರ್ ಮದ್ದ, ಪಿಎಫ್ಐ ಏರಿಯಾ ಅಧ್ಯಕ್ಷರಾದ ರಶೀದ್ ಮೂರ್ಜೆ, ದೂಮಳಿಕೆ ಯೂನಿಟ್ ಅಧ್ಯಕ್ಷರಾದ ಅಶ್ರಫ್ ದೂಮಳಿಕೆ ಹಾಗೂ ಇನ್ನಿತರ ನಾಯಕರು, ಕಾರ್ಯಕರ್ತರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು. ಎಸ್ಡಿಪಿಐ ವಲಯ ಕಾರ್ಯದರ್ಶಿ ರಿಯಾಝ್ ಬಸ್ತಿಕೋಡಿ ಸ್ವಾಗತಿಸಿ ವಂದಿಸಿದರು.

error: Content is protected !!

Join the Group

Join WhatsApp Group