ಸ್ಥಗಿತಗೊಂಡಿದ್ದ ಕಾಸರಗೋಡು-ಮಂಗಳೂರು ಬಸ್‌ ಸಂಚಾರವು ಸೆ.21 ರಿಂದ ಪುನರಾರಂಭ

(ನ್ಯೂಸ್ ಕಡಬ) newskadaba.com ಮಂಗಳೂರು , ಸೆ.14: ಕಾಸರಗೋಡು- ಮಂಗಳೂರು ನಡುವೆ ಬಸ್ ಸಂಚಾರ ಆರಂಭಿಸಲು ಕೇರಳ ರಸ್ತೆ ಸಾರಿಗೆ ನಿಗಮ ತೀರ್ಮಾನಿಸಿದೆ. ಲಾಕ್ ಡೌನ್ ಘೋಷಣೆಯಾದ ಬಳಿಕ ಎರಡೂ ರಾಜ್ಯಗಳ ನಡುವೆ ಬಸ್ ಸಂಚಾರ ಸ್ಥಗಿತವಾಗಿದೆ.

 

 

ಕೇರಳ ಸೆ. 21ರಿಂದ ಕಾಸರಗೋಡು-ಮಂಗಳೂರು ನಡುವೆ ಬಸ್ ಸೇವೆ ಆರಂಭಿಸಲಿದೆ. ಇದರಿಂದಾಗಿ ಉಭಯ ರಾಜ್ಯಗಳ ನಡುವೆ ಸಂಚಾರ ನಡೆಸುವ ಜನರಿಗೆ ಅನುಕೂಲವಾಗಲಿದೆ.ಸೆ. 21ರಂದು ಬಸ್ ಸಂಚಾರ ಆರಂಭವಾದರೆ ಕೇವಲ 40 ಪ್ರಯಾಣಿಕರು ಮಾತ್ರ ಸಂಚಾರ ನಡೆಸಲು ಅವಕಾಶ ನೀಡಲಾಗುತ್ತದೆ.

Also Read  ರಾಜ್ಯ ರಾಜಧಾನಿಯಲ್ಲಿ ನಡೆಯಲಿದೆ ಜೋಡುಕರೆ ಕಂಬಳ !

 

 

 

error: Content is protected !!
Scroll to Top