ಜೇಸಿಐ ಕಡಬ ಕದಂಬದ ಜೇಸಿ ಸಪ್ತಾಹ ‘ಕದಂಬೋತ್ಸವ’ ಸಮಾರೋಪ ➤ ಕೊರೋನಾ ವಾರಿಯರ್ ಹರೀಶ್ ಬೆದ್ರಾಜೆಗೆ ಸನ್ಮಾನ

(ನ್ಯೂಸ್ ಕಡಬ) newskadaba.com ಕಡಬ, ಸೆ.15. ಜೇಸಿಐ ಕಡಬ ಕದಂಬ ಮತ್ತು ಜೇಸಿಐ ಕಡಬ ಕದಂಬ ಚಾರಿಟೇಬಲ್ ಟ್ರಸ್ಟ್ (ರಿ.) ನ ವತಿಯಿಂದ ಕಳೆದೊಂದು ವಾರದಿಂದ ನಡೆಯುತ್ತಿರುವ ಜೇಸಿ ಸಪ್ತಾಹದ ಸಮಾರೋಪ ಸಮಾರಂಭವು ಕಡಬದ ಜೈರಾಮ್ ಟವರ್ಸ್ ನಲ್ಲಿ ಮಂಗಳವಾರ ರಾತ್ರಿ ನಡೆಯಿತು.

ಅತಿಥಿಗಳಾಗಿ ಪುತ್ತೂರು ಎಪಿಎಂಸಿಯ ಮಾಜಿ ಅಧ್ಯಕ್ಷರಾದ ಸೀತಾರಾಮ ಗೌಡ ಪೊಸವಳಿಕೆ, ಜೇಸಿಐ ಭಾರತದ ವಲಯ 15 ರ ಉಪಾಧ್ಯಕ್ಷರಾದ ಲೋಕೇಶ್ ರೈ ಕಡಬ, ರಕ್ತದಾನ ವಿಭಾಗದ ವಲಯ ಸಂಯೋಜಕರಾದ ಅಶೋಕ್ ಕುಮಾರ್ ಪಿ., ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಕೊರೋನಾ ವಾರಿಯರ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಕಡಬ ಪಟ್ಟಣ ಪಂಚಾಯತ್ ನ ಬಿಲ್ ಕಲೆಕ್ಟರ್ ಹರೀಶ್ ಬೆದ್ರಾಜೆಯವರನ್ನು ಸನ್ಮಾನಿಸಿ ಗೌರವಿಸಲಾಯಿತು. ಜೇಸಿಐ ಕಡಬ ಕದಂಬ ಘಟಕಾಧ್ಯಕ್ಷ ಮೋಹನ್ ಕೋಡಿಂಬಾಳ ಅಧ್ಯಕ್ಷತೆ ವಹಿಸಿದ್ದರು.

Also Read  ಕಡಬ ಭಜನಾ ಮಂಡಳಿಯ ಅಧ್ಯಕ್ಷ ಸೋಮಪ್ಪ ನಾಯ್ಕ್ ಅವರಿಗೆ ಒಡಿಯೂರಿನ ತುಳುನಾಡ ಜಾತ್ರೆಯಲ್ಲಿ ಸನ್ಮಾನ

ವೇದಿಕೆಯಲ್ಲಿ ಜೇಸಿಐ ಕಡಬ ಕದಂಬ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ನಾಗರಾಜ್ ಎನ್.ಕೆ., ನಿಕಟಪೂರ್ವಾಧ್ಯಕ್ಷ ರವಿಚಂದ್ರ ಪಡುಬೆಟ್ಟು, ಸಪ್ತಾಹ ನಿರ್ದೇಶಕ ತಿರುಮಲೇಶ್ ಭಟ್, ಘಟಕದ ಕಾರ್ಯದರ್ಶಿ ಝಫೀರ್ ಮಹಮ್ಮದ್ ಉಪಸ್ಥಿತರಿದ್ದರು.

error: Content is protected !!
Scroll to Top