ಪುತ್ತೂರು: ಸ್ಕೂಟರ್ ಹಾಗೂ ಮಹೀಂದ್ರಾ ಟೆಂಪೋ ನಡುವೆ ಢಿಕ್ಕಿ ➤ ಸವಾನಿಗೆ ಗಾಯ

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 17. ಸ್ಕೂಟಿ ಮತ್ತು ಮಹೀಂದ್ರಾ ಟೆಂಪೋ ನಡುವೆ ಢಿಕ್ಕಿ ಸಂಭವಿಸಿ ಸ್ಕೂಟರ್ ಸವಾರ ಗಂಭೀರ ಗಾಯಗೊಂಡ ಘಟನೆ ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮುಕ್ರಂಪಾಡಿ ಎಂಬಲ್ಲಿ ಇಂದು ನಡೆದಿದೆ.

ಗಾಯಗೊಂಡ ಸ್ಕೂಟರ್ ಸವಾರನನ್ನು ಮುಕ್ವೆ ನಿವಾಸಿ ಮಹಮ್ಮದ್ ಅಕ್ಷಮ್ ಎಂದು ಗುರುತಿಸಲಾಗಿದೆ. ಈ ಸಂದರ್ಭ ಅಲ್ಲೇ ಪಕ್ಕದ ಕಛೇರಿಯಲ್ಲಿದ್ದ ಅರುಣ್ ಕುಮಾರ್ ಪುತ್ತಿಲ ಅವರು ಗಾಯಾಳುವನ್ನು ತನ್ನ ವಾಹನದಲ್ಲೇ ಆಸ್ಪತ್ರೆಗೆ ಕರೆದೊಯ್ಯುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

error: Content is protected !!
Scroll to Top