ಕಡಬದ ನೂತನ ತಹಶೀಲ್ದಾರ್ ಆಗಿ ಬಿ. ಅನಂತ ಶಂಕರ್ ನೇಮಕ

(ನ್ಯೂಸ್ ಕಡಬ) newskadaba.com ಕಡಬ, ಸೆ.22. ಕಡಬ ತಹಶೀಲ್ದಾರ್ ಜಾನ್ ಪ್ರಕಾಶ್ ರೋಡ್ರಿಗಸ್ ರವರಿಗೆ ಮುಂಬಡ್ತಿ ನೀಡಿ ಕೃಷಿ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿಯಾಗಿ ವರ್ಗಾವಣೆಗೊಳಿಸಿರುವ ರಾಜ್ಯ ಸರಕಾರವು ಕಡಬದ ನೂತನ ತಹಶೀಲ್ದಾರರಾಗಿ ಬಿ. ಅನಂತಶಂಕರ್ ಅವರನ್ನು ನಿಯುಕ್ತಿಗೊಳಿಸಿದೆ.

ಜಿಲ್ಲಾಧಿಕಾರಿ ಕಛೇರಿಯಲ್ಲಿ ಕರ್ತವ್ಯದಲ್ಲಿದ್ದ ಅನಂತಶಂಕರ್ ರನ್ನು ತತ್‌ಕ್ಷಣದಿಂದಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶ ಬರುವವರೆಗೆ ನಿಯುಕ್ತಿಗೊಳಿಸಿ ಆದೇಶಿಸಿದೆ‌.

error: Content is protected !!

Join the Group

Join WhatsApp Group