ಬೃಹತ್ ಪ್ರಮಾಣದ ಗಾಂಜಾ ಸಾಗಾಟ ➤ ಮೂವರು ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ) newskadaba.com ತಿರುವನಂತಪುರಂ, ಸೆ. 23. ಆಂಧ್ರಪ್ರದೇಶದಿಂದ ಕೇರಳಕ್ಕೆಕಾರಿನಲ್ಲಿ ಸಾಗಾಟ ಮಾಡುತ್ತಿದ್ದ ಸುಮಾರು 1 ಕೋಟಿ ರೂ. ಮೌಲ್ಯದ ಗಾಂಜಾವನ್ನು ಕೇರಳ ರಾಜ್ಯ ಅಬಕಾರಿ ಇಲಾಖಾ ಅಧಿಕಾರಿಗಳು ವಶಕ್ಕೆ ಪಡೆದು, ಮೂವರು ಆರೋಪಿಗಳನ್ನು ಬಂಧಿಸಿರುವ ಘಟನೆ ತಿರುವನಂತಪುರಂ ನಲ್ಲಿ ನಡೆದಿದೆ.

 


ಆರೋಪಿಗಳನ್ನು ಜೋಮಿತ್​​ (38), ಸುರೇಶ್​​ ಕುಮಾರ್​ (32) ಮತ್ತು ವಿತಿನ್​ ರಾಜ್​ (30) ಎಂದು ಗುರುತಿಸಲಾಗಿದೆ. ಭಾರೀ ಪ್ರಮಾಣದ ಗಾಂಜಾವನ್ನು ಆರೋಪಿಗಳು ಎರಡು ಕಾರಿನಲ್ಲಿ ತುಂಬಿಕೊಂಡು ಆಂಧ್ರ ಪ್ರದೇಶದಿಂದ ಬೆಂಗಳೂರು ಮಾರ್ಗವಾಗಿ ಕೇರಳಕ್ಕೆ ಸಾಗಿಸುತ್ತಿದ್ದ ವೇಳೆ ಬಲರಾಮಪುರಂ ಎಂಬಲ್ಲಿ ಕಾರುಗಳನ್ನು ತಡೆದ ಅಬಕಾರಿ ಅಧಿಕಾರಿಗಳು ತಪಾಸಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ಆರೋಪಿಗಳಲ್ಲಿ ಸುರೇಶ್​ ಕುಮಾರ್​ ಎಂಬಾತ ತಿರುವನಂತಪುರಂ ಮತ್ತು ಕೊಲ್ಲಂನಲ್ಲಿ ದಾಖಲಿಸಲಾಗಿರುವ ಕೊಲೆ ಪ್ರಕರಣದ ಆರೋಪಿ ಎಂದು ಈ ವೇಳೆ ತಿಳಿದು ಬಂದಿದೆ. ಆರೋಪಿಗಳ ಸಹಿತ ಗಾಂಜಾ​ ಸಾಗಾಟಕ್ಕೆ ಬಳಸಿಕೊಂಡಿದ್ದ ಎರಡು ಇನ್ನೋವಾ ಕಾರುಗಳನ್ನು ವಶಕ್ಕೆ ಪಡೆಯಲಾಗಿದೆ.

Also Read  ರಾಜ್ಯದಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್ ➤ ನಿಷೇಧಾಜ್ಞೆ ಜಾರಿ

error: Content is protected !!
Scroll to Top