ಕಡಬ: ಕೆಲಸ ಸಿಗದೇ ಬೇಸತ್ತ ಯುವತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಡಬ, ಸೆ. 23. ಎಂ.ಕಾಂ‌. ಪದವೀಧರೆಯಾಗಿಯೂ ಯಾವುದೇ ಸೂಕ್ತ ಉದ್ಯೋಗ ದೊರೆಯದ ಹಿನ್ನೆಲೆಯಲ್ಲಿ ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ತಾಲೂಕಿನ ಕೊಯಿಲ ಗ್ರಾಮದ ಪರಂಗಾಜೆ ಎಂಬಲ್ಲಿ ಬುಧವಾರದಂದು ನಡೆದಿದೆ.

 

ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ಪರಂಗಾಜೆ ನಿವಾಸಿ ಬಾಬು ಗೌಡ ಎಂಬವರ ಪುತ್ರಿ ಭವ್ಯ ಪಿ.ಬಿ.(27) ಎಂದು ಗುರುತಿಸಲಾಗಿದೆ. ಈಕೆ ಎಂ.ಕಾಂ ಪದವೀಧರೆಯಾಗಿದ್ದು, ತನ್ನ ಅರ್ಹತೆಗೆ ತಕ್ಕುದಾದ ಉದ್ಯೋಗ ಇನ್ನೂ ದೊರೆತಿರಲಿಲ್ಲ. ಹಲವೆಡೆ ಉದ್ಯೋಗಕ್ಕೆ ಪ್ರಯತ್ನಿಸಿ ವಿಫಲರಾಗಿದ್ದರು. ಇದೇ ವಿಚಾರದಲ್ಲಿ ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದರು. ಈ ವಿಚಾರದಲ್ಲಿ ಮನನೊಂದು  ಮನೆಯ ಕೋಣೆಯೊಳಗೆ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಯುವತಿಯ ಸಹೋದರ ಉಮೇಶ್ ನೀಡಿದ ದೂರಿನಂತೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಸಿರಾಜುಲ್ ಹುದಾ ಪಾಡಿ ಇದರ ಗಲ್ಫ್ ಕಮಿಟಿ ಅಸ್ತಿತ್ವಕ್ಕೆ ➤ ಅಧ್ಯಕ್ಷರಾಗಿ ಉಮ್ಮರ್ ಝುಹ್ರೀ ಕಲ್ಮಿಂಜ, ಉಪಾಧ್ಯಕ್ಷರಾಗಿ ಅಬ್ದುಲ್ಲಾ ಪೈವಳಿಕೆ

error: Content is protected !!
Scroll to Top