ಉಡುಪಿ – ಚಿಕ್ಕಮಗಳೂರು ಸಂಯುಕ್ತ ಖಾಝಿ ಬೇಕಲ್ ಉಸ್ತಾದ್ ನಿಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.24. ಉಡುಪಿ, ಚಿಕ್ಕಮಗಳೂರು, ಹಾಸನ ಸಂಯುಕ್ತ‌ ಖಾಝಿ, ಪ್ರಖ್ಯಾತ ವಿದ್ವಾಂಸ, ಸೂಫೀವರ್ಯ ಶೈಖುನಾ ತಾಜುಲ್ ಫುಖಹಾಅ್ ಬೇಕಲ್ ಇಬ್ರಾಹಿಂ ಮುಸ್ಲಿಯಾರ್ ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಅಸೌಖ್ಯದ ಹಿನ್ನೆಲೆಯಲ್ಲಿ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಅವರು ಉಡುಪಿ, ಚಿಕ್ಕಮಗಳೂರು, ಹಾಸನ, ಮಂಗಳೂರು ಸೇರಿದಂತೆ ವಿವಿಧ ಮಹಲ್ಲಿನ ಸಂಯುಕ್ತ ಖಾಝಿಯಾಗಿ ಕರ್ತವ್ಯದಲ್ಲಿದ್ದರು.

error: Content is protected !!

Join the Group

Join WhatsApp Group