ಎಲ್ಲಾ ಸಾರ್ವಜನಿಕರಿಗೆ ಕೊರೋನಾ ಟೆಸ್ಟ್ ಕಡ್ಡಾಯ ಆದೇಶದಲ್ಲಿ ತಿದ್ದುಪಡಿ ➤ ನೂತನ ಆದೇಶದಲ್ಲಿ ಏನಿದೆ ಗೊತ್ತೇ.‌..⁉️

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.25. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಎಲ್ಲಾ ಸಾರ್ವಜನಿಕರ ಕೋವಿಡ್ ಪರೀಕ್ಷೆಯನ್ನು ನಡೆಸಿ ಒಂದು ವಾರದೊಳಗೆ ವರದಿ ನೀಡುವಂತೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನಿಂದ ಹೊರಡಿಸಲಾಗಿದ್ದ ಸುತ್ತೋಲೆಯಲ್ಲಿ ಅಲ್ಪ ಬದಲಾವಣೆ ಮಾಡಲಾಗಿದೆ.

ಎಲ್ಲಾ ಸಾರ್ವಜನಿಕರ ಕೊರೋನಾ ಪರೀಕ್ಷೆಗೆ ಬದಲಾಗಿ ಕೊರೋನಾ ಸೋಂಕಿತರ ಹಾಗೂ ಸ್ವ-ಇಚ್ಛೆಯಿಂದ ಕೋವಿಡ್ ಪರೀಕ್ಷೆಯನ್ನು ಮಾಡಲು ಬಯಸುವ ವ್ಯಕ್ತಿಗಳ ಪರೀಕ್ಷೆ ನಡೆಸಿ ಒಂದು ವಾರದೊಳಗೆ ವರದಿ ಸಲ್ಲಿಸುವಂತೆ ನೂತನ ಆದೇಶದಲ್ಲಿ ತಿಳಿಸಲಾಗಿದೆ. ಈ ಬಗ್ಗೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆಸಲ್ಪಡುವ ಶಿಬಿರಗಳ ದಿನಾಂಕ ಮತ್ತು ಮಾಹಿತಿಯನ್ನು ಜಿಲ್ಲಾ ಪಂಚಾಯತ್ ನಿಂದಲೇ ನಿಗದಿಪಡಿಸಲಾಗಿದ್ದು, ವಿವಿಧ ಆರೋಗ್ಯ ಕೇಂದ್ರಗಳ ವ್ಯಾಪ್ತಿಯ ಗ್ರಾಮ ಪಂಚಾಯತ್ ಗಳಲ್ಲಿ ಸೆಪ್ಟೆಂಬರ್ 28 ರಿಂದ ಕೋವಿಡ್ – 19 ತಪಾಸಣಾ ಶಿಬಿರಗಳನ್ನು ಏರ್ಪಡಿಸಲಾಗಿದೆ.

Also Read  ಉಡುಪಿ :ಸ್ವಚ್ಛತಾ ಸೇವಾ ಕೈಂಕರ್ಯದಲ್ಲಿ ಮಂಗಳಮುಖಿಯರ ಸಾಥ್

error: Content is protected !!
Scroll to Top