ಕೊಳ್ನಾಡು: ರಬ್ಬರ್‌ ತೋಟದಲ್ಲಿ ಕೆಲಸಕ್ಕಿದ್ದ ಕೇರಳ ಮೂಲದ ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕೊಳ್ನಾಡು, ಸೆ.26:  ರಬ್ಬರ್‌ ತೋಟದಲ್ಲಿ ಕೇರಳ ಮೂಲದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಠಾಣಾ ವ್ಯಾಪ್ತಿಯ ಕೊಳ್ನಾಡು ಗ್ರಾಮದ ಕಾಡುಮಠ ಎಂಬಲ್ಲಿ ನಡೆದಿದೆ.

 

 

ಮೃತ ವ್ಯಕ್ತಿ ಕೇರಳ ರಾಜ್ಯದ ಕಣ್ಣೂರು ಜಿಲ್ಲೆಯ ಇರುವಸ್ಯ ಸಲ್ಮೋಯಿ ತೋಮಸ್(55 ವ.) ಎಂದು ಗುರುತಿಸಲಾಗಿದೆ. ಇವರು ಕೊಳ್ನಾಡು ಗ್ರಾಮದ ಕಾಡುಮಠ ಎಂಬಲ್ಲಿ ಖಾಸಗಿ ವ್ಯಕ್ತಿಯೋರ್ವರ ಮಾಲಕತ್ವದ ರಬ್ಬರ್‌ ತೋಟದಲ್ಲಿ ಕಳೆದ ಹಲವಾರು ವರ್ಷಗಳಿಂದ ಸಲ್ಮೋಯಿ ತೋಮಸ್‌ ರವರು ಕೆಲಸ ಮಾಡಿಕೊಂಡಿದ್ದರು. ಇನ್ನು ಆತ್ಮಹತ್ಯೆಗೆ ಕಾರಣ ಏನು ಎಂಬುದು ತಿಳಿದು ಬಂದಿಲ್ಲ. ಈ ಬಗ್ಗೆ ವಿಟ್ಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Also Read  ಉಸ್ತುವಾರಿ ಸಚಿವರಿಂದ ಜಾನುವಾರು ಗಣತಿ ಪೋಸ್ಟರ್ ಬಿಡುಗಡೆ

 

error: Content is protected !!
Scroll to Top