ಚಿರತೆಗೆ ಕಾರು ಡಿಕ್ಕಿ, ಚಾಲಕ ಪರಾರಿ ► ಪ್ರಜ್ಞಾಹೀನ ಸ್ಥಿತಿಯಲ್ಲಿ ಚಿರತೆ

(ನ್ಯೂಸ್ ಕಡಬ) newskadaba.com ಹಾಸನ,ಸೆ.22. ಕಾರು ಡಿಕ್ಕಿ ಹೊಡೆದ ಪರಿಣಾಮ ಚಿರತೆಯೊಂದು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನದ ಅರಸೀಕೆರೆ ತಾಲೂಕಿನ ಬಾಣಾವರ ಕೆರೆ ಬಳಿ ನಡೆದಿದೆ.

ಕೆರೆ ಏರಿ ಮೇಲೆ ಬಂದ ಚಿರತೆಗೆ ಎದುರಿನಿಂದ ವೇಗವಾಗಿ ಬಂದ ಕಾರು ಏಕಾಏಕಿ ಡಿಕ್ಕಿ ಹೊಡೆದಿದೆ. ಘಟನೆ ಬಳಿಕ ಕಾರಿನ ಚಾಲಕ ಪರಾರಿಯಾಗಿದ್ದಾನೆ.

ಢಿಕ್ಕಿ ಹೊಡೆದ ಪರಿಣಾಮ ಚಿರತೆಯ ಮುಖಕ್ಕೆ ಗಂಭೀರವಾಗಿ ಗಾಯಗಳಾಗಿದ್ದು, ಪ್ರಜ್ಞಾಹೀನ ಸ್ಥಿತಿಯಲ್ಲಿ ರಸ್ತೆಯಲ್ಲಿ ಬಿದ್ದಿದೆ. ತಕ್ಷಣ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಬಂದು ಚಿರತೆಯನ್ನು ತಮ್ಮ ವಶಕ್ಕೆ ಪಡೆದು ಅರಸೀಕೆರೆ ಆಸ್ಪತ್ರೆಗೆ ಸೇರಿಸಿದ್ದಾರೆ. ಸದ್ಯಕ್ಕೆ ಚಿರತೆಗೆ ಚಿಕಿತ್ಸೆ ನಡೆಯುತ್ತಿದೆ.

error: Content is protected !!

Join the Group

Join WhatsApp Group