ಮಂಗಳೂರಿನಲ್ಲಿ ಅಕ್ರಮ ಜಾನುವಾರು ಸಾಗಾಟ ➤ ಸಂಘ ಪರಿವಾರದಿಂದ ದಿಡೀರ್ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಅ.04: ಕರಾವಳಿ ಭಾಗಗಳಲ್ಲಿ ಇತ್ತೀಚಿಗೆ ಹೆಚ್ಚು ಅಕ್ರಮ ಗೋ ಸಾಗಾಟ ಮಾಡುತ್ತಿರುವುದು ಕೇಳಿಬರುತ್ತಿದೆ. ಆದರೆ ಇಲ್ಲೋಂದು ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ವೇಳೆ ಆರು ಕರುಗಳು ವಾಹನದಿಂದ ಬಿದ್ದ ಘಟನೆ ಮಂಗಳೂರಿನಲ್ಲಿ ಇಂದು ಬೆಳಕಿಗೆ ಬಂದಿದೆ.

ಕರುಗಳನ್ನು ಅಕ್ರಮವಾಗಿ ಕುದ್ರೋಳಿಯ ಕಸಾಯಿಖಾನೆಗೆ ಸಾಗಿಸಲಾಗುತ್ತಿತ್ತು ಎಂದು ತಿಳಿದುಬಂದಿದೆ. ಈ ಘಟನೆಯ ಬಗ್ಗೆ  ವಿಷಯ ತಿಳಿದ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಮತ್ತು ಭಜರಂಗದಳದ ಕಾರ್ಯಕರ್ತರು ಮನ್ನಗುಡ್ಡದಲ್ಲಿ ದಿಡೀರ್ ಪ್ರತಿಭಟನೆ ನಡೆಸಿ, ಅಕ್ರಮ ಗೋಸಾಗಾಟದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

Also Read  ಅರಂತೋಡು: ಪ್ರಧಾನ ಮಂತ್ರಿ ಪೋಷಣ್ ಶಕ್ತಿ ನಿರ್ಮಾಣ್ ಕಾರ್ಯಕ್ರಮ ಉದ್ಘಾಟನೆ

error: Content is protected !!
Scroll to Top