ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಸಿ.ಟಿ.ರವಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 04. ಕರ್ನಾಟಕ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸಿ.ಟಿ.ರವಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಆಗಿ ಆಯ್ಕೆಯಾದ ಹಿನ್ನೆಲೆಯಲ್ಲಿ, ಸಿಎಂ ಯಡಿಯೂರಪ್ಪ ಅವರಿಗೆ ಶನಿವಾರ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ.

 

ಸಿ.ಟಿ.ರವಿ ಅಕ್ಟೋಬರ್ 2ರ ಗಾಂಧಿ ಜಯಂತಿಯಂದೇ ರಾಜೀನಾಮೆ ನೀಡಲು ನಿರ್ಧರಿಸಿದ್ದರು. ಆದರೆ ಗಾಂಧಿ ಜಯಂತಿಯಂದು ಸಿಎಂ ಯಡಿಯೂರಪ್ಪ ಸಿಗದ ಕಾರಣ ನಿನ್ನೆ ರಾಜೀನಾಮೆ ಸಲ್ಲಿಸಿದ್ದಾರೆ ಎನ್ನಲಾಗಿದೆ.ಸಿ.ಟಿ.ರವಿ ಅವರು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಾಗ ಪಕ್ಷ ಬಯಸಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದರು. ಅಂತೆಯೇ ಈಗ ಕೊಟ್ಟ ಮಾತಿನಂತೆ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

Also Read  ಅನಧಿಕೃತ ಫ್ಲೆಕ್ಸ್-ಬ್ಯಾನರ್ ಅಳವಡಿಕೆ ವಿರುದ್ಧ ಕಟ್ಟುನಿಟ್ಟಿನ ಕ್ರಮ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೂಚನೆ

 

error: Content is protected !!
Scroll to Top