ಕುಕ್ಕೆ ಸುಬ್ರಹ್ಮಣ್ಯ: ಬಿಜೆಪಿ ಯುವ ಮೋರ್ಚಾದ ರಾಜ್ಯಾಧ್ಯಕ್ಷರಾದ ಡಾ| ಸಂದೀಪ್‌ ಕುಮಾರ್ ಭೇಟಿ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಅ.06: ನಾಡಿನ ಪ್ರಸಿದ್ಧ ಕ್ಷೇತ್ರವಾದ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಿಜೆಪಿ ಯುವ ಮೋರ್ಚಾದ ರಾಜ್ಯಾಧ್ಯಕ್ಷರಾದ ಡಾ| ಸಂದೀಪ್‌ ಕುಮಾರ್‌ ರವರು ಇಂದು ಭೇಟಿ ನೀಡಿ ದೇವರ ದರ್ಶನ ಪಡೆದರು.

 

 

ಈ ಸಂದರ್ಭದಲ್ಲಿ ಬಿಜೆಪಿ ಯುವ ಮೋರ್ಚದ ಜಿಲ್ಲಾಧ್ಯಕ್ಷರಾದ ಗುರುದನ್‌ ನಾಯಕ್‌ ಹಾಗೂ ಯುವ ಮೋರ್ಚಾದ ಜಿಲ್ಲಾ ಪದಾಧಿಕಾರಿಗಳು, ಸುಳ್ಯ ಮಂಡಲದ ಯುವ ಮೋರ್ಚಾದ ಅಧ್ಯಕ್ಷರಾದ ಶ್ರೀ ಕೃಷ್ಣ ಎಂ.ಆರ್, ಪ್ರದಾನ ಕಾರ್ಯದರ್ಶಿ ಸುನೀಲ್‌ ಕೇರ್ಪಳ ಹಾಗೂ ಯುವ ಮೋರ್ಚಾದ ಮಂಡಲ ಪದಾಧಿಕಾರಿಗಳು ,ಕಾರ್ಯದರ್ಶಿಗಳು, ದ.ಕ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ವತಿಯಿಂದ ಹಾಗೂ ಸುಳ್ಯ ಮಂಡಲದ ಬಿಜೆಪಿ ಯುವ ಮೋರ್ಚಾದ ವತಿಯಿಂದ ಹೃತ್ಪೂರಕವಾಗಿ ಸ್ವಾಗತಿಸಲಾಯಿತು.

 

Also Read  ಉಡುಪಿ: ಅಪರೂಪದ ಐತಿಹಾಸಿಕ ಕಲ್ಲಿನ ರಚನೆ ಪತ್ತೆ !!

 

error: Content is protected !!
Scroll to Top