ಇಂಧನ ಸಚಿವ ಡಿ.ಕೆ.ಶಿವಕುಮಾರ್ ನಾಳೆ ಕುಕ್ಕೇ ಸುಬ್ರಹ್ಮಣ್ಯಕ್ಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.23. ಇಂಧನ ಖಾತೆ ಹಾಗೂ ರಾಮನಗರ ಉಸ್ತುವಾರಿ ಸಚಿವ ಡಿ.ಕೆ.ಶಿವಕುಮಾರ್ ನಾಳೆ ರಾತ್ರಿ ಮಂಗಳೂರಿಗೆ ಆಗಮಿಸಲಿದ್ದು, ಸೆಪ್ಟೆಂಬರ್ 24ರಂದು ಕುಕ್ಕೇ ಶ್ರೀ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಲಿದ್ದಾರೆ.

ನಾಳೆ ರಾತ್ರಿ 8.15 ಕ್ಕೆ ಮಂಗಳೂರು ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿ ವಾಸ್ತವ್ಯ ಹೂಡಲಿದ್ದು, ಸೆಪ್ಟಂಬರ್ 24 ರಂದು ಬೆಳಿಗ್ಗೆ ಮಂಗಳೂರಿನಿಂದ ಕುಕ್ಕೆ ಸುಬ್ರಮಣ್ಯಕ್ಕೆ ತೆರಳಲಿದ್ದಾರೆ. ಸಂಜೆ 4.30 ಕ್ಕೆ ಮಂಗಳೂರಿಗೆ ಹಿಂತಿರುಗಿ ಮಂಗಳೂರು, ಕಾರ್ಪೋರೇಟ್ ಕಛೇರಿಯಲ್ಲಿ ಮೆಸ್ಕಾಂ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಲಿದ್ದಾರೆ.

Also Read  ಗೌರವ ಡಾಕ್ಟರೇಟ್ ಹೆಸರಿನ ಮುಂದೆ "ಡಾ." ಪದ ಬಳಸುವಂತಿಲ್ಲ- ರಾಜ್ಯ ಸರ್ಕಾರ

error: Content is protected !!
Scroll to Top