ಎಸ್‍ಪಿಗೆ ಪತ್ರ ಬರೆದ ಹತ್ರಾಸ್ ಪ್ರಕರಣದ ಪ್ರಮುಖ ಆರೋಪಿ ➤ ಪತ್ರದಲ್ಲಿ ಏನಿದೆ ಗೋತ್ತೆ..?!

(ನ್ಯೂಸ್ ಕಡಬ) newskadaba.com ಹತ್ರಾಸ್, ಅ. 08: ಹತ್ರಾಸ್ ಪ್ರಕರಣದದಲ್ಲಿ ಬಂಧಿತನಾಗಿರುವ ಪ್ರಮುಖ ಆರೋಪಿ ಸಂದೀಪ್ ಎಸ್‍ಪಿಗೆ ಪತ್ರ ಬರೆದಿರುವ ವಿಚಾರ ಬೆಳಕಿಗೆ ಬಂದಿದೆ. ಪತ್ರದಲ್ಲಿ ತಾನು ನಿರ್ದೋಷಿಯಾಗಿದ್ದು, ನಿಷ್ಪಕ್ಷಪಾತ ತನಿಖೆ ನಡೆಯಬೇಕೆಂದು ಸಂದೀಪ್ ಒತ್ತಾಯಿಸಿದ್ದಾನೆ.

 

 

ಸೆಪ್ಟೆಂಬರ್ 7ರಂದು ಜೈಲಿನಿಂದಲೇ ಹತ್ರಾಸ್ ಎಸ್‍ಪಿಗೆ ಪತ್ರ ಬರೆದಿರುವ ಸಂದೀಪ್, ಬಂಧಿತ ಇನ್ನುಳಿದ ಮೂವರು ಸಹ ನಿರಪರಾಧಿಗಳು. ಆಕೆಯ ತಾಯಿ ಮತ್ತು ಸೋದರನ ವಿರುದ್ಧ ಗಂಭೀರ ಆರೋಪಗಳನ್ನ ಮಾಡಿದ್ದಾನೆ.19 ವರ್ಷದ ಯುವತಿ ಜೊತೆ ನನ್ನ ಸ್ನೇಹವಿತ್ತು. ಆದ್ರೆ ನಮ್ಮಿಬ್ಬರ ಸ್ನೇಹ ಕುಟುಂಬಸ್ಥರಿಗೆ ಇಷ್ಟವಿರಲಿಲ್ಲ. ಘಟನೆಯ ದಿನ ನಾನು ಸ್ಥಳದಲ್ಲಿದ್ದೆ. ಆದ್ರೆ ಯುವತಿ ತಾಯಿ ಮತ್ತು ಸೋದರ ನನ್ನನ್ನು ಮನೆಗೆ ಕಳುಹಿಸಿದರು. ನಂತರ ನನ್ನನ್ನ ಆರೋಪಿಯೆಂದು ಬಂಧಿಸಿ ಜೈಲಿಗೆ ಕರೆತರಲಾಯ್ತು. ಯುವತಿಯ ಮೇಲೆ ಆಕೆ ತಾಯಿ ಮತ್ತು ಸೋದರ ಹಲ್ಲೆ ನಡೆಸಿದ್ದರಿಂದ ಅವಳು ಸಾವನ್ನಪ್ಪಿದ್ದಾಳೆ.

Also Read  ಆಟೋ ಚಾಲಕ ನೇಣುಬಿಗಿದು ಆತ್ಮಹತ್ಯೆ..!

ನಮ್ಮ ಮೇಲೆ ಸುಳ್ಳು ಕೇಸ್ ದಾಖಲಿಸಿ ಜೈಲಿನಲ್ಲಿರಿಸಲಾಗಿದೆ.ನಿರಪರಾಧಿಗಳಾದ ನಮಗೆ ನ್ಯಾಯ ನೀಡಬೇಕೆಂದು ನಿಮ್ಮಲ್ಲಿ ಕೇಳಿಕೊಳ್ಳುತ್ತಿದ್ದೇವೆ ಎಂದು ಸಂದೀಪ್ ಪತ್ರದಲ್ಲಿ ಹೇಳಿದ್ದಾನೆ. ಇನ್ನುಳಿದ ಬಂಧಿತ ರವಿ, ರಾಮು ಮತ್ತು ಲವಕುಶ್ ಅವರ ಸಹಿ ಈ ಪತ್ರದಲ್ಲಿದೆ.

error: Content is protected !!
Scroll to Top