ಮೀನುಗಾರಿಕೆ ದೋಣಿ ಮುಳುಗಡೆ ➤ 7 ಮೀನುಗಾರರು ಪ್ರಾಣಾಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಕಾರವಾರ, ಅ. 08: ಮರಳುಗಾರಿಕೆ ನಡೆಸುತ್ತಿದ್ದ ದೋಣಿಯೊಂದು ನದಿಯಲ್ಲಿ ಮುಳುಗಿದ ಘಟನೆ ನಡೆದಿದ್ದು, ಅಚ್ಚರಿ ರೀತಿಯಲ್ಲಿ 7 ಮೀನುಗಾರರನ್ನು ರಕ್ಷಿಸಲಾಗಿದೆ.ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ಘಟನೆ ನಡೆದಿದೆ.

 

ತಾಲೂಕಿನ ಮಾನೀರ್ ಗ್ರಾಮದ ಸಮೀಪ ಅಘನಾಶಿನಿ ನದಿಯಲ್ಲಿ ಈ ಅವಘಡ ಸಂಭವಿಸಿದ್ದು, ದೋಣಿಯಲ್ಲಿದ್ದ 7 ಮಂದಿ ಕಾರ್ಮಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇತರರ ಮೀನುಗಾರರೇ ಅವರನ್ನು ರಕ್ಷಿಸುವ ಮೂಲಕ ಜೀವ ಉಳಿಸಿದ್ದಾರೆ. ಸದ್ಯ ಯಾವುದೇ ದುರ್ಘಟನೆ ನಡೆಯದಂತೆ ಪಾರಾಗಿದ್ದಾರೆ. ಮರಳುಗಾರಿಕೆಗೆ ತೆರಳಿದ್ದ  ವೇಳೆ ದೋಣಿಯ ಮೇಲೆ ಭಾರ ಹೆಚ್ಚಾದ ಪರಿಣಾಮ ನದಿಯಲ್ಲಿ ಮಗುಚಿದೆ. ಈ ವೇಳೆ ದೋಣಿಯಲ್ಲಿದ್ದ 7 ಜನ ನದಿಯಲ್ಲಿ ಬಿದ್ದಿದ್ದಾರೆ.

ಇದನ್ನು ಕಂಡ ಹತ್ತಿರದ ಮತ್ತೊಂದು ದೋಣಿಯ ಮೀನುಗಾರರು ತಕ್ಷಣವೇ ಎಚ್ಚೆತ್ತುಕೊಂಡು ದೋಣಿಯಲ್ಲಿ ಒಟ್ಟು 7 ಜನ ಮೀನುಗಾರರನ್ನು ರಕ್ಷಿಸಿದ್ದಾರೆ. ಇದರಿಂದಾಗಿ ದೋಣಿಯಲ್ಲಿದ್ದ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Also Read  ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಆಚರಣೆ ➤ ಜಿಲ್ಲಾಪ್ರಶಸ್ತಿಗೆ ಅರ್ಜಿ ಆಹ್ವಾನ

error: Content is protected !!
Scroll to Top