ಹಿಟ್ ಚಿತ್ರಗಳ ನಿರ್ದೇಶಕ ವಿಜಯ್ ರೆಡ್ಡಿ ವಿಧಿವಶ

(ನ್ಯೂಸ್ ಕಡಬ) newskadaba.com ಚೆನ್ನೈ, ಅ. 10:   ಸ್ಯಾಂಡಲ್ ವುಡ್ ಹಿರಿಯ ನಿರ್ದೇಶಕ ವಿಜಯ ರೆಡ್ಡಿ ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಇಂದು ನಿಧನರಾಗಿದ್ದಾರೆ. ಬಹು ಅಂಗಾಂಗ ವೈಫಲ್ಯದಿಂದ ಬಳಲುತಿದ್ದ ಸ್ಯಾಂಡಲ್ ವುಡ್ ಹಿರಿಯ ನಿರ್ದೇಶಕ ವಿಜಯ ರೆಡ್ಡಿ (84) ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಇಂದು ನಿಧನರಾಗಿದ್ದಾರೆ.

 

ಕನ್ನಡದಲ್ಲಿ ಸುಮಾರು 40 ಕ್ಕೂ ಹೆಚ್ಚು ಚಿತ್ರಗಳಿಗೆ ನಿರ್ದೇಶಕ ವಿಜಯ ಆಕ್ಷನ್ ಕಟ್ ಹೇಳಿದ್ದರು. ಡಾ. ರಾಜ್ ಕುಮಾರ್ ನಟನೆಯ ಗಂಧದ ಗುಡಿ, ಮಯೂರ. ಶ್ರೀನಿವಾಸ ಕಲ್ಯಾಣ, ಬಡವರ ಬಂಧು, ಸನಾದಿ ಅಪ್ಪಣ್ಣ. ಭಕ್ತ ಪ್ರಹ್ಲಾದ, ಹುಲಿ ಹಾಲಿನ ಮೇವು ಸೇರಿದಂತೆ ಹಲವು ಸಿನಿಮಾಗಳಿಗೆ ವಿಜಯ್ ರೆಡ್ಡಿ ಆಕ್ಷನ್ ಕಟ್ ಹೇಳಿದ್ದರು.

 

 

 

Scroll to Top