ಬಂಟ್ವಾಳ :ಶ್ರೀ ಕ್ಷೇತ್ರ ಕಾರಿಂಜ ದೇವಸ್ಥಾನದಲ್ಲಿ ಬಂಡೆ ಕುಸಿತ

(ನ್ಯೂಸ್ ಕಡಬ) newskadaba.com ಬಂಟ್ವಾಳ . 14: ಕರಾವಳಿಯಲ್ಲಿ ಎರಡು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಗೆ, ನಾಲ್ಕು ಯುಗಗಳ ಪುರಾಣ ಇತಿಹಾಸ ಹೊಂದಿರುವ ಶ್ರೀ ಕ್ಷೇತ್ರ ಕಾರಿಂಜ ದೇವಸ್ಥಾನದ ಎಡ ಪಾಶ್ರ್ವದ ಬದಿಗೆ ಕಟ್ಟಿದ್ದ ಕಲ್ಲಿನ ತಡೆಗೋಡೆ ಕುಸಿದು ಬಿದ್ದಿದೆ.

 

 

ಈ ಅಂಗಣವನ್ನು ವಾನರಗಳಿಗೆ ನೈವೇದ್ಯ ಹಾಕಲು ಬಳಸಲಾಗುತ್ತಿತ್ತು. ಆದರೆ ಇದೀಗಾ ಭಾರಿ ಮಳೆಗೆ ಇಂಟರ್ ಲಾಕ್ ಕಿತ್ತುಹೋಗಿದೆ.ಕುಸಿದ ಭಾಗದ ಕೆಳಭಾಗದಲ್ಲಿ ಕಲ್ಲು, ಮಣ್ಣಿನ ದಿಬ್ಬವಿದ್ದು, ಯಾವುದೇ ಹಾನಿಯಾಗಿಲ್ಲ, ತಜ್ಞನಪರಿಶೀಲನೆ ಬಳಿಕ ಪರಿಹಾರೋಪಾಯ ನಡೆಸಬೇಕಾಗಿದೆ ಎಂದು ಆಡಳಿತಾಧಿಕಾರಿ ನೋಣಯ್ಯ ನಾಯ್ಕ್ ಅವರು ತಿಳಿಸಿದ್ದಾರೆ.

 

Scroll to Top