ಪಟಾಕಿ ಅಂಗಡಿಗಳಿಗೆ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ ➤ ಮಾರ್ಗಸೂಚಿಯಲ್ಲಿ ಏನಿದೆ ಗೊತ್ತೇ.!

(ನ್ಯೂಸ್ ಕಡಬ) newskadaba.com ಬೆಂಗಳೂರು . 15: ಕೊರೊನಾ ವೈರಸ್‌ ನಡುವೆಯೇ ದೀಪಾವಳಿ ಹಬ್ಬದ ಆಚರಣೆಗೆ ರಾಜ್ಯ ಸರಕಾರ ಮಾರ್ಗಸೂಚಿ ಪ್ರಕಟ ಮಾಡಿದೆ. ಈ ಬಾರಿ ಸರಳ ಹಾಗೂ ಮಾಲಿನ್ಯ ರಹಿತ ದೀಪಾವಳಿ ಆಚರಣೆಗೆ ಸರಕಾರ ಕರೆ ನೀಡಿದೆ. ನವೆಂಬರ್‌ 14 ರಿಂದ 17ರವರೆಗೆ ದೀಪಾವಳಿ ಹಬ್ಬದ ಆಚರಣೆ ಇರಲಿದ್ದು, ಈ ಸಂದರ್ಭದಲ್ಲಿ ಕೊರೊನಾ ಮಾರ್ಗಸೂಚಿ ಪಾಲಿಸುವಂತೆ ಸರಕಾರ ಜನರಿಗೆ ಸೂಚಿಸಿದೆ.

 

ಇನ್ನು, ದೀಪಾವಳಿ ಸಂದರ್ಭದಲ್ಲಿ ಪ್ರಾಧಿಕಾರಗಳಿಂದ ಅಧಿಕೃತ ಪರವಾನಿಗೆಯನ್ನು ಪಡೆದ ಮಾರಾಟಗಾರರು ಮಾತ್ರ ಪಟಾಕಿಯನ್ನು ಮಾರಾಟ ಮಾಡಬೇಕೆಂದು ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ್‌ಭಾಸ್ಕರ್ ಆದೇಶಿದ್ದಾರೆ. ಈ ಕುರಿತು ರಾಜ್ಯದ ಜನತೆಗೆ ಮಾರ್ಗಸೂಚಿಗಳನ್ನು ಪ್ರಕಟಿಸಿರುವ ಅವರು, ಪಟಾಕಿ ಮಾರಾಟದ ಮಳಿಗೆಗಳನ್ನು ನ.1ರಿಂದ 17ರವರೆಗೆ ಮಾತ್ರ ತೆರೆದಿರಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

Also Read  ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ ಗೆ ಬಿಜೆಪಿ ಆಗ್ರಹ..!     ರಾಜ್ಯಪಾಲರ ಮೇಲೆ 'ಕೈ' ಪಡೆ ವಿಶ್ವಾಸ

 

error: Content is protected !!
Scroll to Top