ದಸರಾ ವೇಳೆ ಪ್ರವಾಸಿ ತಾಣಗಳಿಗೆ ಪ್ರವೇಶ ನಿರ್ಬಂಧ ➤ ಡಿಸಿ ರೋಹಿಣಿ ಸಿಂಧೂರಿ ಆದೇಶ

(ನ್ಯೂಸ್ ಕಡಬ) newskadaba.com ಮೈಸೂರು . 15 : ಮೈಸೂರು ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಈ ಬಾರಿಯ ನಾಡಹಬ್ಬ ದಸರ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಗುತ್ತಿದ್ದು, ಈ ಸಂದರ್ಭದಲ್ಲಿ ಮೈಸೂರು ಹಾಗೂ ಸುತ್ತಮುತ್ತಲಿನ ಪ್ರಮುಖ ಪ್ರವಾಸಿ ತಾಣಗಳಿಗೆ ಪ್ರವಾಸಿಗರು ಆಗಮಿಸದಂತೆ ಜಿಲ್ಲಾಕಾರಿ ರೋಹಿಣಿ ಸಿಂಧೂರಿ ಅವರು ಮನವಿ ಮಾಡಿದ್ದಾರೆ.

ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳಾದ ಚಾಮುಂಡಿಬೆಟ್ಟ ಪ್ರವೇಶವನ್ನು ಅ.14 ರಿಂದ ಹಾಗೂ ಮೈಸೂರು ಅರಮನೆ, ಮೃಗಾಲಯ, ನಂಜನಗೂಡು ನಂಜುಂಡೇಶ್ವರ ದೇವಾಲಯದ ಪ್ರವೇಶವನ್ನು ಅ. 17ರಿಂದ ನ. 1ರವರೆಗೆ ನಿರ್ಬಂದಿಸಲಾಗಿದೆ.ಮೈಸೂರಿಗೆ ಸಮೀಪದ ಪ್ರವಾಸಿ ತಾಣವಾದ ಕೃಷ್ಣರಾಜ ಸಾಗರ, ರಂಗನತಿಟ್ಟು ಪಕ್ಷಿಧಾಮ, ಶ್ರೀರಂಗಪಟ್ಟಣ, ನಿಮಿಷಾಂಭಕ್ಕೂ ಸಾರ್ವಜನಿಕರ ಪ್ರವೇಶವನ್ನು ನಿರ್ಬಂದಿಸಲು ಅಲ್ಲಿನ ಜಿಲ್ಲಾಡಳಿತಕ್ಕೆ ಮನವಿ ಮಾಡಲಾಗುವುದು ಎಂದವರು ತಿಳಿಸಿದ್ದಾರೆ.ಮೈಸೂರು ಜಿಲ್ಲೆಯಲ್ಲಿ ಈಗಾಗಲೇ ಸುಮಾರು 6800ಕ್ಕೂ ಹೆಚ್ಚು ಸಕ್ರಿಯ ಕೋವಿಡ್ ಪ್ರಕರಣಗಳಿವೆ. ಈ ಪರಿಸ್ಥಿತಿಯಲ್ಲಿ ಪ್ರವಾಸಿಗರು ಮೈಸೂರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವುದು ಸೂಕ್ತವಲ್ಲ ಎಂದು ಅವರು ತಿಳಿಸಿದ್ದಾರೆ.

error: Content is protected !!

Join the Group

Join WhatsApp Group