ಮೂಡಬಿದಿರೆ: ವಿದ್ಯಾಗಮ ಯೋಜನೆಯಡಿ ಪಾಠ ಮಾಡುತ್ತಿದ್ದ ಶಿಕ್ಷಕಿ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಅ.16: ರಾಜ್ಯದಲ್ಲಿ ಕೊರೊನಾ ವೈರಸ್ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ವಿದ್ಯಾಗಮ ಯೋಜನೆಯಡಿ ಪಾಠ ಮಾಡಲು ಮಕ್ಕಳ ಬಳಿಗೆ ಹೋಗುತ್ತಿದ್ದ ಮೂಡುಬಿದಿರೆ ಶಿಕ್ಷಕಿಯೊಬ್ಬರು ಇಂದು ಮೃತಪಟ್ಟಿದ್ದಾರೆ.

 

 

ವಿದ್ಯಾಗಮ ಯೋಜನೆಯಡಿ ಪಾಠ ಮಾಡಲು ಮಕ್ಕಳ ಬಳಿಗೆ ಹೋಗುತ್ತಿದ್ದ ಶಿಕ್ಷಕಿ ಪದ್ಮಾಕ್ಷಿ ಯವರಿಗೆ ಸೆ. 29 ರಂದು ಕೋವಿಡ್ 19 ಸೋಂಕು ದೃಢಪಟ್ಟಿತ್ತು. ಬಳಿಕ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ.

 

Also Read  ಓವರ್ ಟೇಕ್ ಭರದಲ್ಲಿ ಸರಣಿ ಅಪಘಾತ - ನಾಲ್ವರಿಗೆ ಗಾಯ

error: Content is protected !!
Scroll to Top