ಬೆಂಗಳೂರಿನ ಬಾರ್‌ ಮಾಲೀಕ ಮನೀಷ್ ಶೆಟ್ಟಿ ಮೇಲೆ ಶೂಟೌಟ್

(ನ್ಯೂಸ್ ಕಡಬ) newskadaba.com ಬೆಂಗಳೂರು . 16: ಗುರುವಾರ ರಾತ್ರಿ ನಗರದ ರೆಸ್ಟ್ ಹೌಸ್ ಪಾರ್ಕ್ ರಸ್ತೆಯಲ್ಲಿ ಮಾಲೀಕನ ಮೇಲೆ ಶೂಟೌಟ್‌ ಮಾಡಲಾಗಿದೆ.ಡ್ಯುಯೆಟ್ ಬಾರ್ ಮಾಲೀಕನಾಗಿರುವ ಮನೀಷ್ ಮೇಲೆ ಎರಡು ಬೈಕಿನಲ್ಲಿ ಬಂದ ಮೂವರು ವ್ಯಕ್ತಿಗಳು ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ.

 

ಮನೀಷ್‌ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.ಘಟನೆ ನಡೆದ ಸ್ಥಳದಲ್ಲಿ ಒಂದು ಡಿಯೋ ಬೈಕ್ ಬಿಟ್ಟು ಹೋಗಿದ್ದಾರೆ. ಪಬ್ ನಿಂದ ಇನ್ನೂರು ಮೀಟರ್ ದೂರದಲ್ಲಿ ಮತ್ತೊಂದು ಬೈಕ್ ಮತ್ತು ಡಬ್ಬಲ್ ಬ್ಯಾರಲ್ ಗನ್ ಎಸೆದು ಆರೋಪಿಗಳು ಪರಾರಿಯಾಗಿದ್ದಾರೆ.ಸ್ಥಳಕ್ಕೆ ಕಬ್ಬನ್ ಪಾರ್ಕ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Also Read  ಏ.26ರಂದು ಯೋಗಿ ಆದಿತ್ಯನಾಥ್ ಮಂಡ್ಯಕ್ಕೆ ಭೇಟಿ ನೀಡಲಿದ್ದಾರೆ.!  

error: Content is protected !!
Scroll to Top