ಕುಂಡಾಜೆ: ಕೋಮು ಘರ್ಷಣೆ ಪ್ರಕರಣ ► ಮೂವರ ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಕಡಬ, ಸೆ.25. ಕಡಬ ಠಾಣಾ ವ್ಯಾಪ್ತಿಯ ಕುಂಡಾಜೆ ಎಂಬಲ್ಲಿ ಭಾನುವಾರ ಸಂಜೆ ನಡೆದ ಕೋಮು ಘರ್ಷಣೆಗೆ ಸಂಬಂಧಿಸಿದಂತೆ ಮೂವರು ಆರೋಪಿಗಳ ವಿರುದ್ಧ ಸೆಕ್ಷನ್ 307ರ ಪ್ರಕಾರ ಕೊಲೆ ಯತ್ನ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ.


ಘಟನೆ ಸಂಬಂದಿಸಿದಂತೆ ಕುಂಡಾಜೆ ನಿವಾಸಿ ಝಕರಿಯಾ ಮತ್ತು ಅವರ ತಂಗಿ ಜಮೀಳಾ ಎಂಬವರಿಗೆ ಹಲ್ಲೆ ನಡೆಸಿದ ಆರೋಪದಡಿಯಲ್ಲಿ ರಾಮಕುಂಜ ನಿವಾಸಿಗಳಾದ ಅಶ್ವತ್, ರಿತೇಶ್ ಹಾಗೂ ಕೃಷ್ಣ ಎಂಬವರನ್ನು ಬಂಧಿಸಲಾಗಿದ್ದು, ಝಕರಿಯಾ ಅವರು ಭಾನುವಾರ ಸಂಜೆ ಉಪ್ಪಿನಂಗಡಿಯಿಂದ ಜೀಪಿನಲ್ಲಿ ಬಂದು ಕುಂಡಾಜೆಯಲ್ಲಿ ಇಳಿದು ತನ್ನ ಮನೆಯತ್ತ ತೆರಳುತ್ತಿದ್ದ ಸಂದರ್ಭ ಕುಡಿತ ಅಮಲಿನಲ್ಲಿದ್ದ ಆರೋಪಿಗಳು ಬೈಕಿನಲ್ಲಿ ಬಂದು ವಿನಾಕಾರಣ ತಗಾದೆ ತೆಗೆದು ಹಲ್ಲೆ ನಡೆಸಿದ್ದಾರೆ. ಈ ಸಂದರ್ಭ ನಾನು ಮನೆಯ ಕಡೆಗೆ ಬಂದಿದ್ದು ಆರೋಪಿಗಳು ಮನೆಗೆ ನುಗ್ಗಿ ನನಗೆ ಹಾಗೂ ನನ್ನ ಸಹೋದರಿ ಜಮೀಳಾ ಅವರಿಗೆ ಜೀವ ಬೆದರಿಕೆ ಒಡ್ಡಿ ಹಲ್ಲೆ ನಡೆಸಿ ಕೊಲೆ ಯತ್ನ ಮಾಡಿದ್ದಾರೆ ಎಂದು ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಝಕರಿಯಾ ಅವರು ಕಡಬ ಪೊಲೀಸರಿಗೆ ದೂರು ನೀಡಿದ ಹಿನ್ನೆಲೆಯಲ್ಲಿ ಕಡಬ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.

Also Read  ಕ್ಷುಲ್ಲಕ ಕಾರಣಕ್ಕಾಗಿ ಯುವಕ ನೇಣು ಬಿಗಿದು ಆತ್ಮಹತ್ಯೆ ► ಕಾರಣ ಕೇಳಿದರೆ ನಿಮಗೆ ಆಶ್ಚರ್ಯವಾಗಬಹುದು..!

error: Content is protected !!
Scroll to Top