ಸುಳ್ಯ :ವಸತಿಗೃಹವೊಂದರಲ್ಲಿ ಯುವಕ-ಯುವತಿ ಆತ್ಯಹತ್ಯೆಗೆ ಶರಣು.!

(ನ್ಯೂಸ್ ಕಡಬ) newskadaba.com ಸುಳ್ಯ  . 19: ಸುಳ್ಯ ನಗರದ ವಸತಿಗೃಹವೊಂದರಲ್ಲಿ ಯುವಕ ಹಾಗೂ ಯುವತಿಆತ್ಮಹತ್ಯೆಗೆ ಶರಣಾಗಿರುವ ಘಟನೆ ಇಂದು ನಡೆದಿದೆ. ಆತ್ಮಹತ್ಯೆಗೆ ಶರಣಾದ ಯುವಕನನ್ನು ಐವರ್ನಾಡಿನ ಕಟ್ಟತ್ತಾರು ತಿಮ್ಮಪ್ಪ ಗೌಡರ ಪುತ್ರ ದರ್ಶನ್ ಎಂದು ತಿಳಿದು ಬಂದಿದೆ.

 

ನೇಣು ಬಿಗಿದ ಸ್ಥಿತಿಯಲ್ಲಿ ಇಬ್ಬರ ಮೃತದೇಹಗಳು ಪತ್ತೆಯಾಗಿದೆ .ಇನ್ನು ಆತ್ಮಹತ್ಯೆಗೆ ಶರಣಾಗಿರುವ ಯುವತಿ ಬೆಳ್ತಂಗಡಿ ನಿವಾಸಿ ಎಂದು ತಿಳಿದು ಬಂದಿದೆ. ಆದರೆ ಯುವಕ ಹಾಗೂ ಯುವತಿಯ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

error: Content is protected !!

Join the Group

Join WhatsApp Group