ಚಾಲಿ ಪೊಲೀಲು ಖ್ಯಾತ ನಟ ಸುರೇಂದ್ರ ಬಂಟ್ವಾಳ್ ಬರ್ಬರ ಕೊಲೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಅ. 21. ತುಳು ಸಿನಿಮಾ ನಟ ಹಾಗೂ ಹಿಂದೂ ಸಂಘಟನೆಗಳಲ್ಲಿ ತನ್ನನ್ನು ತಾನು ಗುರುತಿಸಿಕೊಂಡಿದ್ದ ಸುರೇಂದ್ರ ಬಂಟ್ವಾಳ್ ಅವರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಇಂದು ಮದ್ಯಾಹ್ನ ಬಂಟ್ವಾಳದಲ್ಲಿ ನಡೆದಿದೆ.


ಇವರು ತುಳು ಭಾಷೆಯ ಖ್ಯಾತ ಸಿನಿಮಾ ಚಾಲಿ ಪೋಲೀಲು ಸಿನಿಮಾದಲ್ಲಿ ನಟಿಸಿದ್ದರು, ಅಲ್ಲದೇ ಹಲವು ತುಳು ಸಿನಿಮಾ ಹಾಗೂ ಸವರ್ಣ ದೀರ್ಘ ಸಂಧಿ ಎಂಬ ಕನ್ನಡ ಸಿನಿಮಾದಲ್ಲೂ ನಟಿಸಿದ್ದರು. ಹಿಂದೂ ಸಂಘಟನೆಗಳಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದ ಅವರು. ಬಂಟ್ವಾಳದ ಬಿಸಿ ರೋಡಿನ ಪ್ಲ್ಯಾಟ್ ಒಂದರಲ್ಲಿ ವಾಸ ಮಾಡುತ್ತಿದ್ದರು. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

error: Content is protected !!

Join the Group

Join WhatsApp Group