ಕಾಸರಗೋಡು: ನೇಣು ಬಿಗಿದು ವಿದ್ಯಾರ್ಥಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಾಸರಗೋಡು, ಅ.21: ಬೇಕಲ ಠಾಣಾ ವ್ಯಾಪ್ತಿಯ ತೃಕ್ಕನ್ನಾಡ್ ಎಂಬಲ್ಲಿ ವಿದ್ಯಾರ್ಥಿಯೋರ್ವ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿಯನ್ನು ತೃಕ್ಕನ್ನಾಡ್ ನ ಪ್ರಸಾದ್ ರಾಘವರವರ ಪುತ್ರ ವಿಘ್ನೇಶ್ ( 13) ಎಂದು ಗುರುತಿಸಲಾಗಿದೆ.

 

ಕಾಸರಗೋಡಿನಲ್ಲಿರುವ ಅಜ್ಜಿ ಮನೆಯಲ್ಲಿದ್ದ ವಿಘ್ನೇಶ್ ಕೆಲ ದಿನಗಳ ಹಿಂದೆ  ತೃಕ್ಕನ್ನಾಡ್ ನಲ್ಲಿರುವ ಮನೆಗೆ ಬಂದಿದ್ದನು. ಈತ ಏಳನೇ ತರಗತಿ ವಿದ್ಯಾರ್ಥಿ. ಕಳೆದ ದಿನ ತಾಯಿ ಮತ್ತು ಸಹೋದರಿ ಹೊರಗಡೆ ತೆರಳಿದ್ದ ಸಂದರ್ಭದಲ್ಲಿ ಈತ ಕೃತ್ಯ ನಡೆಸಿದ್ದಾನೆ.  ಇಬ್ಬರು ಮನೆಗೆ ಮರಳಿದಾಗ ವಿಘ್ನೇಶ್ ಫ್ಯಾನ್ ಗೆ ನೇಣು ಬಿಗಿದಿರುವುದು ಕಂಡು ಬಂದಿದೆ. ಕೂಡಲೇ ಈತನನ್ನು ಉದುಮದಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಮೃತಪಟ್ಟಿದ್ದರು ಎಂದು ತಿಳಿದು ಬಂದಿದೆ. ಕೃತ್ಯಕ್ಕೆ ನಿಖರ ಕಾರಣ ಏನು ಎಂವುದು ತಿಳಿದುಬಂದಿಲ್ಲ. ಇನ್ನು ಈತನ ತಂದೆ ಪ್ರಸಾದ್ ಗಲ್ಫ್ ಉದ್ಯೋಗಿಯಾಗಿದ್ದು, ಸುದ್ದಿ ತಿಳಿದು ಊರಿಗೆ ಹೊರಟಿದ್ದಾರೆ. ಬೇಕಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Also Read  ಮತ್ತೆ ಇಂದು ಏರಿಕೆಯಾದ ಚಿನ್ನದ ದರ

 

error: Content is protected !!
Scroll to Top