ಬೆಂಗಳೂರು: ಪ್ರಸಿದ್ಧ ಗವಿ ಗಂಗಾಧರೇಶ್ವರ ದೇವಸ್ಥಾನದ ಬಳಿ ಗೋಡೆ ಕುಸಿತ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.23: ಸಿಲಿಕಾನ್ ಸಿಟಿಯಲ್ಲಿ ಮಳೆರಾಯನ ಆರ್ಭಟ ತುಸು ಜೋರಾಗಿಯೇ ಇದ್ದು, ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದ ನಗರದ ಹಲವು ಕಡೆಗಳಲ್ಲಿ ಜನ ತತ್ತರಿಸಿ ಹೋಗಿದ್ದಾರೆ.

 

 

ಇತ್ತ, ಕಳೆದ ದಿನ ರಾತ್ರಿ ಸುರಿದ ಭಾರಿ ಮಳೆಗೆ ನಗರದ ಇತಿಹಾಸ ಪ್ರಸಿದ್ಧ ಗವಿ ಗಂಗಾಧರೇಶ್ವರ ದೇವಸ್ಥಾನದ ಬಳಿ ಗೋಡೆ ಕುಸಿತ ಸಂಭವಿಸಿದೆ. ಭಾರಿ ಮಳೆಯಿಂದ ಗವಿಪುರಂ ಗುಟ್ಟಹಳ್ಳಿಯಲ್ಲಿರುವ ದೇವಸ್ಥಾನದ ಗೋಡೆ ಭಾಗಶಃ ಕುಸಿದಿದ್ದು, ಜೊತೆಗೆ ದೇಗುಲದ ಒಳ ಆವರಣ ಗೋಡೆಗಳಿಗೆ ಭಾಗಶಃ ಹಾನಿ ಸಂಭವಿಸಿದೆ.

Also Read  ಒತ್ತಡಕ್ಕೆ ಮಣಿದು ಮಂಗಳೂರು ವಿ.ವಿ.ಯು ಅಂತರಾಷ್ಟ್ರೀಯ ತುಳು ಗೋಷ್ಠಿಯನ್ನು ರದ್ದುಗೊಳಿಸಿರುವುದು ಮೂರ್ಖತನದ ಪರಮಾವಧಿಯಾಗಿದೆ ➤ ಶೌವಾದ್ ಗೂನಡ್ಕ

 

error: Content is protected !!
Scroll to Top