ತಿರುಪತಿ ದೇವಾಲಯದ ಬಾಯ್ಲರ್ ನಿಂದ ಬಿಸಿನೀರು ಸೋರಿಕೆ ➤ ಐವರಿಗೆ ಗಾಯ, ಇಬ್ಬರಿಗೆ ಗಂಭೀರ

(ನ್ಯೂಸ್ ಕಡಬ) newskadaba.com ಆಂಧ್ರಪ್ರದೇಶ, ಅ. 25. ಬಾಯ್ಲರ್ ನಿಂದ ಬಿಸಿನೀರು ಸೋರಿಕೆಗೊಂಡು ಕಾರ್ಮಿಕರಿಗೆ ಸಿಡಿದಿದ್ದು, ಐವರು ಕಾರ್ಮಿಕರು ಗಾಯಗೊಂಡು, ಇಬ್ಬರು ಕಾರ್ಮಿಕರು ಗಂಭೀರ ಗಾಯಗೊಂಡ ಘಟನೆ ತಿರುಪತಿ ದೇವಸ್ಥಾನದಲ್ಲಿ ನಡೆದಿದೆ.

 

ಅಡುಗೆ ಮನೆಯಲ್ಲಿ ಬಾಯ್ಲರ್ ನಿಂದ ನೀರು ಸೋರಿಕೆಯಾಗಿ, ಕಾರ್ಮಿಕರ ಮೇಲೆ ಬಿದ್ದಿರುವ ಪರಿಣಾಮ, ಐವರು ಕೆಲಸಗಾರರು ಗಾಯಗೊಂಡು ಇವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ, ಈ ಕಾರ್ಮಿಕರನ್ನು ಆಸ್ಪತ್ರೆಗೆ ದಾಖಲಿಸಿ ಸೂಕ್ತ ಚಿಕಿತ್ಸೆ ನೀಡುತ್ತಿರುವುದಾಗಿ ಟಿಟಿಡಿ ತಿಳಿಸಿದೆ.

Also Read  ಮುಂಬೈ: ಭಯೋತ್ಪಾದಕ ದಾಳಿ ಎಚ್ಚರಿಕೆ-ಪೊಲೀಸರಿಂದ ಹೈ ಅಲರ್ಟ್

error: Content is protected !!
Scroll to Top