ಬೆಂಗಳೂರು: ಅನಧಿಕೃತ ಕಟ್ಟಡಗಳ ನೆಲಸಮಕ್ಕೆ ನಿರ್ಧರಿಸಿದ ಬಿಬಿಎಂಪಿ

 (ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 26. ಭಾರೀ ಮಳೆಯಿಂದಾಗಿ ದಕ್ಷಿಣ ಬೆಂಗಳೂರಿನಲ್ಲಿ ಕೃತಕ ನೆರೆ ಉಂಟಾಗುತ್ತಿದ್ದು, ಈ ಹಿನ್ನೆಲೆಯಲ್ಲಿ (ಬಿಬಿಎಂಪಿ)ಯು ಸುಮಾರು ನೂರಕ್ಕೂ ಹೆಚ್ಚು ಅನಧಿಕೃತ ಕಟ್ಟಡಗಳನ್ನು ಧ್ವಂಸ ಮಾಡಲು ನಿರ್ಧಾರ ಮಾಡಿದೆ.

.

ಬಿಬಿಎಂಪಿಯ ಕಮಿಷನರ್ ಎನ್. ಮಂಜುನಾಥ್ ಪ್ರಸಾದ್ ಅವರು ಈ ಬಗ್ಗೆ ಹೇಳಿಕೆ ನೀಡಿದ್ದಾರೆ. ಭಾರೀ ಮಳೆಯಿಂದಾಗಿ ದಕ್ಷಿಣ ಬೆಂಗಳೂರಿನ ಕೆಲವು ಭಾಗಗಳಲ್ಲಿ ಕೃತಕ ನೆರೆಯುಂಟಾಗಿತ್ತು. ನೆರೆಯಿಂದಾಗಿ ಅನಧಿಕೃತ ಕಟ್ಟಡಗಳಿಗೆ ಭಾರೀ ಹಾನಿಯುಂಟಾಗಿದೆ. ಇದಕ್ಕಾಗಿ ರಾಜ್ಯ ಸರ್ಕಾರವು ತಲಾ 25 ಸಾವಿರ ರೂಪಾಯಿಯನ್ನು ಪರಿಹಾರವಾಗಿ ನೀಡಿದೆ.

Also Read  ರಾಜ್ಯಪಾಲರ ನಿರ್ಧಾರದ ವಿರುದ್ದ ಸಿಡಿದೆದ್ದ ಕಾಂಗ್ರೆಸ್ - ಆ. 19ರಂದು ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ

error: Content is protected !!
Scroll to Top