ಮುಂಬೈನಲ್ಲಿ ಶಿವಸೇನಾ ಮುಖಂಡನ ಹತ್ಯೆ

(ನ್ಯೂಸ್ ಕಡಬ) newskadaba.com ಮುಂಬೈ . 26: ಮುಂಬೈನ ಲೋನವಾಲದಲ್ಲಿ ಇಂದು ಬೆಳಗ್ಗೆ 9.30ರ ಸಮಯದಲ್ಲಿ ಸ್ಥಳೀಯ ಶಿವಸೇನಾ ಘಟಕದ ಮಾಜಿ ಅಧ್ಯಕ್ಷನನ್ನು ದುಷ್ಕರ್ಮಿಗಳು ಗುಂಡು ಹೊಡೆದು, ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾರೆ. ವಾಹನದಲ್ಲಿ ಬಂದ ಇಬ್ಬರು ಅಪರಿಚಿತರು ಈ ಕೃತ್ಯ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೊಲೆಯಾದ ವ್ಯಕ್ತಿಯನ್ನು ಲೋನವಾಲದ ಶಿವಸೇನೆಯ ಘಟಕದ ಮಾಜಿ ಅಧ್ಯಕ್ಷ ರಾಹುಲ್ ಉಮೇಶ್ ಶೆಟ್ಟಿ ಎಂದು ಗುರುತಿಸಲಾಗಿದೆ. ಬೆಳಗ್ಗೆ 9.30ರ ಸುಮಾರಿನಲ್ಲಿ ಅಪರಿಚಿತರು ಸಮೀಪದಿಂದ ಗುಂಡು ಹಾರಿಸಿದ್ದಾರೆ ಮತ್ತು ಇರಿದಿದ್ದಾರೆ. ರಾಹುಲ್ ಅವರನ್ನು ಆಸ್ಪತ್ರೆಗೆ ದಾಖಲಿಸುವ ಹೊತ್ತಿಗೆ ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ.ಈ ಸಂಬಂಧ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಿಸಿ ಟಿವಿಯ ದೃಶ್ಯಾವಳಿಗಳ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡು ತನಿಖೆಯನ್ನು ತೀವ್ರಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Also Read  ಚಂಡಮಾರುತ ತೀವ್ರವಾಗಿದ್ದು ಇಂದು ಅರಬ್ಬಿ ಸಮುದ್ರದ ಮೇಲೆ ಹೊರಹೊಮ್ಮಿ ಓಮನ್ ಕರಾವಳಿಯತ್ತ ಸಾಗುವ ನಿರೀಕ್ಷೆ

error: Content is protected !!
Scroll to Top