ಪಿಲಿಕುಳ ಜೈವಿಕ ಉದ್ಯಾನವನದ “ವಿಕ್ರಂ ಹುಲಿ” ಇನ್ನಿಲ್ಲ

(ನ್ಯೂಸ್ ಕಡಬ) newskadaba.com ಮಂಗಳೂರು . 27:  2003ರಲ್ಲಿ ಶಿವಮೊಗ್ಗದ ತಾವರೆಕೊಪ್ಪ ಸಫಾರಿಯಿಂದ ಪಿಲಿಕುಳ ಜೈವಿಕ ಉದ್ಯಾನವನಕ್ಕೆ ಕರೆತರಲಾಗಿತ್ತು. ವಿಕ್ರಂ ಹುಲಿಗೆ ಹತ್ತು ಮರಿಗಳಿದ್ದು, ಅವು ದೇಶದ ವಿವಿಧ ಮೃಗಾಲಯಗಳಲ್ಲಿವೆ.

21 ವರ್ಷದ ವಿಕ್ರಂ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿತ್ತು. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಹುಲಿಗೆ ಪಶು ವೈದ್ಯಾಧಿಕಾರಿಗಳು ಚಿಕಿತ್ಸೆ ನೀಡುತ್ತಿದ್ದರು. ವಿಕ್ರಮ್ ಕಳೆದ ಒಂದು ವಾರದಿಂದ ಆಹಾರ ಸೇವನೆ ನಿಲ್ಲಿಸಿತ್ತುಮೂತ್ರಪಿಂಡಕ್ಕೆ ಸಂಬಂಧಿಸಿದ ಕಾಯಿಲೆ ಮತ್ತು ದೃಷ್ಟಿಹೀನತೆಯಿಂದ ಬಳಲುತ್ತಿತ್ತು. ಇದರಿಂದ ಒಂದು ವಾರದಿಂದ ಆಹಾರ ಸೇವನೆಗೂ ಹಿಂದೇಟು ಹಾಕುತ್ತಿತ್ತು. ಆರೋಗ್ಯ ತೀರಾ ಹದಗೆಟ್ಟು ವಿಕ್ರಂ ಕಳೆದ ದಿನ ಸಾವನ್ನಪ್ಪಿದೆ. ಎಂದು ವೈದ್ಯರು ತಿಳಿಸಿದ್ದಾರೆ.

Also Read  ಪೆರುವಾಜೆ : ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಪ್ರಾರಂಭ

 

 

 

 

error: Content is protected !!
Scroll to Top