ಕೊಂಬೆಟ್ಟು: ಅಪಾಯಕಾರಿ ಸ್ಥಿತಿಯಲ್ಲಿದ್ದ ಮರಗಳ ಗೆಲ್ಲುಗಳ ತೆರವು

(ನ್ಯೂಸ್ ಕಡಬ) newskadaba.com ಪುತ್ತೂರು, ಅ. 27. ಶಾಸಕ ಸಂಜೀವ ಮಠಂದೂರು ಅವರ ಸೂಚನೆಯಂತೆ ಕೊಂಬೆಟ್ಟು ಬಳಿ ವಿದ್ಯುತ್‌ ತಂತಿಗಳಿಗೆ ಬಾಗಿಕೊಂಡು ಅಪಾಯಕಾರಿ ಸ್ಥಿತಿಯಲ್ಲಿದ್ದ ಮರಗಳ ಗೆಲ್ಲುಗಳನ್ನು ಇಂದು ನಗರ ಸಭೆ ಸ್ಥಳೀಯ ಸದಸ್ಯ ಪಿ.ಜಿ. ಜಗನ್ನಿವಾಸ ರಾವ್‌ ಅವರ ನೇತೃತ್ವದಲ್ಲಿ ತೆರವುಗೊಳಿಸಲಾಯಿತು.

 

 

ಮೆಸ್ಕಾಂ ಮತ್ತು ಅರಣ್ಯ ಇಲಾಖೆ ಜಂಟಿ ಆಶ್ರಯದಲ್ಲಿ ಕಾರ್ಯಚರಣೆ ಮಾಡಲಾಯಿತು. ನಗರಸಭೆ ಮತ್ತು ಸಂಚಾರ ಪೊಲೀಸ್‌ ಠಾಣೆ ಸಹಕಾರ ನೀಡಿದರು.

 

 

Scroll to Top