ರಾಜವಂಶಸ್ಥ ಯದುವೀರ್ ಒಡೆಯರ್ ತಮ್ಮ ಮಗನ ಜೊತೆ ಗಜಪಡೆ ವೀಕ್ಷಣೆ

(ನ್ಯೂಸ್ ಕಡಬ) newskadaba.com ಮೈಸೂರು, ಅ. 28. ದಸರಾ ಹಬ್ಬದ ಆಚರಣೆ ಹಾಗೂ ನವರಾತ್ರಿಯ ಸಾಂಪ್ರದಾಯಿಕ ಆಚರಣೆಗಳನ್ನು ನೆರವೇರಿಸಿದ ಬಳಿಕ ರಿಲ್ಯಾಕ್ಸ್ ಮೂಡ್ ‍ನಲ್ಲಿರುವ ರಾಜವಂಶಸ್ಥ ಯದುವೀರ್ ಒಡೆಯರ್ ತಮ್ಮ ಮಗ ಆದ್ಯವೀರ್ ಜೊತೆಗೆ ಕಾರಿನಲ್ಲಿ ಅರಮನೆ ಸುತ್ತಾಡಿದ ಯದುವೀರ್, ದಸರಾ ಗಜಪಡೆಯ ಬೀಳ್ಕೊಡುಗೆ ಕಾರ್ಯಕ್ರಮಕ್ಕೆ ಆಗಮಿಸಿ ಮಗನೊಂದಿಗೆ ಸಂಭ್ರಮದಿಂದ ಕಾಲ ಕಳೆದರು.

 

 

ಈ ವೇಳೆ ಗಜಪಡೆ ಸಾರಥಿ ಅಭಿಮನ್ಯು ಮುಂದೆ ಫೋಟೋಗೆ ಪೋಸ್ ಕೊಟ್ಟು ಅಭಿಮನ್ಯು ಆನೆಯನ್ನು ಮುಟ್ಟಿದ ಯದುವೀರ್ ಪುತ್ರ ಆದ್ಯವೀರ್ ಸಂತಸ ತೋರಿದರು. ಇದಕ್ಕೂ ಮೊದಲು ಅರಮನೆ ಆವರಣದಲ್ಲಿರುವ ಕೋಡಿ ಸೋಮೇಶ್ವರ ದೇವಾಲಯಕ್ಕೆ ತೆರಳಿದ ಯದುವೀರ್, ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.ದಸರಾ ಸಂಭ್ರಮದಲ್ಲಿ ಪಾಲ್ಗೊಂಡು ಜಂಬೂಸವಾರಿ ಮೆರವಣಿಗೆಯನ್ನು ಯಶಸ್ವಿಯಾಗಿ ಮುಗಿಸಿದ ಅಭಿಮನ್ಯು ಸಾರಥ್ಯದ ಗಜಪಡೆ ಇಂದುನಾಡಿನಿಂದ ಕಾಡಿನತ್ತ ಹೊರಟವು. ದಸರಾ ಮಹೋತ್ಸವದ ಅಂಗವಾಗಿ ಮೈಸೂರಿಗೆ ಆಗಮಿಸಿ ಜಂಬೂಸವಾರಿಯಲ್ಲಿ ಯಶಸ್ವಿಯಾಗಿ ಪಾಲ್ಗೊಂಡಿದ್ದ ಗಜಪಡೆಗೆ ಜಿಲ್ಲಾಡಳಿತದಿಂದ ಆತ್ಮೀಯವಾಗಿ ಬೀಳ್ಕೊಡಲಾಯಿತು. ದಸರಾ ಗಜಪಡೆ ಹೊರಡುವ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಅಭಿಮನ್ಯು, ವಿಕ್ರಮ, ಗೋಪಿ, ವಿಜಯ ಮತ್ತು ಕಾವೇರಿ ಆನೆಗಳಿಗೆ ಪೂಜೆ ನೆರವೇರಿಸಲಾಯಿತು.

 

Also Read  ಮಣಿಪಾಲ: 35 ಅಂತಸ್ತುಗಳ ಕಟ್ಟಡ ಏರಿದ ಜ್ಯೋತಿರಾಜ್.!

error: Content is protected !!
Scroll to Top