ಬೆಟ್ಟದಿಂದ ವ್ಯಾನ್ ಉರುಳಿ 7 ಮಂದಿ ಮೃತ್ಯು.!?

(ನ್ಯೂಸ್ ಕಡಬ) newskadaba.com ಹೈದರಾಬಾದ್ . 30: ಮದುವೆ ಸಮಾರಂಭ ಮುಗಿಸಿಕೊಂಡು ಹಿಂದಿರುಗುತ್ತಿದ್ದ ವಾಹನ ಬ್ರೇಕ್​ ಫೇಲ್​ ಆದ ಕಾರಣ ಬೆಟ್ಟದಿಂದ ಕೆಳಗಡೆ ಉರುಳಿ, 7 ಮಂದಿ ದಾರುಣ ಸಾವಿಗೀಡಾಗಿರುವ ಘಟನೆ ಆಂಧ್ರ ಪ್ರದೇಶದ ಈಸ್ಟ್​ ಗೋದಾವರಿ ಜಿಲ್ಲೆಯ ತಂತಿಕೊಂಡ ಜಿಲ್ಲೆಯಲ್ಲಿ ನಡೆದಿದೆ.

ಶುಕ್ರವಾರ ನಸುಕಿನ ಜಾವ 3.30ರ ಸುಮಾರಿಗೆ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ತಂತಿಕೊಂಡಾ ಘಾಟ್​ ರಸ್ತೆಯಲ್ಲಿರುವ ವೆಂಕಟೇಶ್ವರ ಸ್ವಾಮಿ ದೇವಸ್ಥಾನದ ಬಳಿ ದುರ್ಘಟನೆ ಸಂಭವಿಸಿದೆ. ಮದುವೆ ಮಂಟಪದಿಂದ ಹೊರಟ ಕೆಲವೇ ಕ್ಷಣಗಳಲ್ಲಿ ವ್ಯಾನ್​ ಬೆಟ್ಟದಿಂದ ಕೆಳಕ್ಕೆ ಉರುಳಿದೆ. ಏಳು ಮಂದಿ ಮೃತಪಟ್ಟಿದ್ದು, 10ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ಗೋಕವರಂ ಮಂಡಲದ ಠಾಕೂರ್‌ಪಾಲೆಂ ಗ್ರಾಮಕ್ಕೆ ಸೇರಿದವರು ಎಂದು ತಿಳಿದು ಬಂದಿದೆ.

Also Read  ಕೊರೊನಾ ಜೊತೆಗೆ ಇತರ ಕಾಯಿಲೆಗಳ ನಿಯಂತ್ರಣಕ್ಕೂ ಆದ್ಯತೆ ನೀಡಿ ➤ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಆರೋಗ್ಯ ಇಲಾಖೆ ಸೂಚನೆ

error: Content is protected !!
Scroll to Top