ಮಗುವಿಗೂ ವಿಷವುಣಿಸಿ ಆತ್ಮಹತ್ಯೆಗೆ ಯತ್ನಿಸಿದ ದಂಪತಿ ಪ್ರಕರಣ ➤ ಕುಟುಂಬದ ಮೂವರೂ ಮೃತ್ಯು

(ನ್ಯೂಸ್ ಕಡಬ) newskadaba.com  ಬೆಳ್ತಂಗಡಿ . 04: ಬೆಳ್ತಂಗಡಿಯ ಕೊಕ್ರಾಡಿಯಲ್ಲಿ ಸೋಮವಾರ ರಾತ್ರಿ ಮಗುವಿನೊಂದಿಗೆ ದಂಪತಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿತ್ತು, ಈ ಪ್ರಕರಣದಲ್ಲಿ ತಂದೆ ಹಾಗೂ ಮಗು ಚಿಕಿತ್ಸೆ ಫಲಿಸದೆ ಕಳೆದ ದಿನ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು. ಆದರೆ ಇಂದು ಅವರ ಪತ್ನಿಯು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

 

ಕೊಕ್ರಾಡಿಯ ಅತ್ರಿಜಾಲು ನಿವಾಸಿ ಚಂದ್ರಶೇಖರ ಶೆಟ್ಟಿಗಾರ್(37) ಪತ್ನಿ ಆಶಾ(30) ಹಾಗೂ 5 ವರುಷ ಪ್ರಾಯದ ಪುತ್ರಿಗೂ ವಿಷವುಣಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ತಕ್ಷಣ ಇವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆಯಿಂದ ಮೂವರ ಸ್ಥಿತಿಯು ಚಿಂತಾಜನಕವಾಗಿತ್ತು.ಕೌಟುಂಬಿಕ ಕಲಹದಿಂದ ಆತ್ಮಹತ್ಯೆಗೆ ಯತ್ನಿಸಿರಬಹುದೆಂದು ಸ್ಥಳಿಯರು ಸಂಶಯ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ವೇಣೂರು ಪೋಲಿಸರು ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದರು. ಆದರೆ ಇಂದು ಚಂದ್ರಶೇಖರ್ ರವರ ಪತ್ನಿಯು ಮೃತಪಟ್ಟಿದ್ದಾರೆ. ಪ್ರಕರಣದಲ್ಲಿ ಕುಟುಂಬದ ಮೂವರು ಮೃತಪಟ್ಟಿದ್ದಾರೆ.

Also Read  ಕಡಬದ ಸಿದ್ಧಿ ಟೆಕ್ಸ್ ಟೈಲ್ಸ್ ನಲ್ಲಿ ಜುಲೈ 30ರ ವರೆಗೆ ಡಿಸ್ಕೌಂಟ್ ಸೇಲ್ ➤ ಎಲ್ಲಾ ಉಡುಪುಗಳ ಮೇಲೆ 10 - 40% ಡಿಸ್ಕೌಂಟ್

error: Content is protected !!
Scroll to Top