ಮಂಗಳೂರು: ನಾಳೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರ ಆಗಮನ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 03. ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಬಿಜೆಪಿ ರಾಜ್ಯ ಕಾರ್ಯಕಾರಣಿ ಸಭೆಯಲ್ಲಿ ಭಾಗವಹಿಸಲು ನಾಳೆ (ನ. 04) ರಾತ್ರಿ ಮಂಗಳೂರಿಗೆ ಆಗಮಿಸಲಿದ್ದಾರೆ.

 

 

ನವೆಂಬರ್ 5 ರಂದು ಮಂಗಳೂರು ಕೊಡಿಯಾಲ್ ಬೈಲ್​ನಲ್ಲಿರುವ ಟಿ.ವಿ.ರಮಣ ಪೈ ಸಭಾಂಗಣದಲ್ಲಿ ರಾಜ್ಯ ಬಿಜೆಪಿಯ ವಿಶೇಷ ಸಭೆಯನ್ನು ಉದ್ಘಾಟಿಸಲಿದ್ದು, ಈ ಸಭೆಯಲ್ಲಿ ಭಾಗವಹಿಸಲು ಒಂದು ದಿನ ಮುಂಚಿತವಾಗಿಯೇ ಮುಖ್ಯಮಂತ್ರಿಗಳು ಮಂಗಳೂರಿಗೆ ಆಗಮಿಸಲಿದ್ದಾರೆ. ಬೆಳಗ್ಗೆ 11.30ಕ್ಕೆ ಹೋಟೆಲ್ ಓಷಿಯನ್ ಪರ್ಲ್​ನಲ್ಲಿ ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆಯಲ್ಲಿಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 2.30 ಕ್ಕೆ ಟಿ.ವಿ.ರಮಣ ಪೈ ಸಭಾಂಗಣದಲ್ಲಿ ವಿಶೇಷ ಸಭೆಯಲ್ಲಿ ಭಾಗವಹಿಸಲಿದ್ದಾರೆ. ತದನಂತರ ಕಾರ್ಯಕ್ರಮ ಮುಗಿದ ತಕ್ಷಣ ರಾತ್ರಿ 7.35 ಕ್ಕೆ ಮಂಗಳೂರು ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ತೆರಳಲಿದ್ದಾರೆ.

 

 

error: Content is protected !!

Join the Group

Join WhatsApp Group