ಮಂಗಳೂರಿನಲ್ಲಿ ಮುಂದುವರಿದ ದುಷ್ಕರ್ಮಿಗಳ ಅಟ್ಟಹಾಸ ➤ ಹಾಡಹಗಲೇ ಉದ್ಯಮಿಯ ಹತ್ಯೆ.!



(ನ್ಯೂಸ್ ಕಡಬ) newskadaba.com ಮಂಗಳೂರು . 04: ಕೇರಳ ಮೂಲದ ಉದ್ಯಮಿಯೊಬ್ಬರನ್ನು ದುಷ್ಕರ್ಮಿಗಳು ಚೂರಿಯಿಂದ ಹಾಡಹಗಲೇ ಇರಿದು ಹತ್ಯೆ ಮಾಡಿದ ಘಟನೆ ನಗರದ ಕಾವೂರಿನಲ್ಲಿ ಮಂಗಳವಾರ ನಡೆದಿದೆ. ಕಾವೂರು ಮಲ್ಲಿ ಲೇಔಟ್ ನಿವಾಸಿ ಸುರೇಂದ್ರನ್ (60) ಕೊಲೆಯಾದ ವ್ಯಕ್ತಿ ಎಂದು ತಿಳಿದುಬಂದಿದೆ.





ಫಾರ್ಮ್ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದ ಮೂಲತಃ ಕೇರಳದವರಾದ ಸುರೇಂದ್ರನ್ ಅವರು ಹಲವು ವರ್ಷಗಳಿಂದ ಕಾವೂರು ಮಲ್ಲಿ ಲೇಔಟ್‌ನಲ್ಲೇ ಸ್ವಂತ ಮನೆ ಮಾಡಿ ತನ್ನ ಪತ್ನಿ ಜತೆ ವಾಸಿಸುತ್ತಿದ್ದರು.  ಮಧ್ಯಾಹ್ನ 1 ಗಂಟೆ ವೇಳೆಗೆ ಸುರೇಂದ್ರನ್ ಅವರು ಮನೆಗೆ ಮರಳಿ ಬಂದಿದ್ದು, ಆ ಬಳಿಕ ದುಷ್ಕರ್ಮಿಗಳು ಕೊಲೆ ಕೃತ್ಯವೆಸಗಿದ್ದಾರೆ. ಈ ಕುರಿತು ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.






 

 

 

 

error: Content is protected !!
Scroll to Top