ಉಪ್ಪಿನಂಗಡಿ :ಟಿಪ್ಪರ್ -ಬೈಕ್ ನಡುವೆ ಭೀಕರ ಅಪಘಾತ ➤ ಬೈಕ್ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, . 04: ಉಪ್ಪಿನಂಗಡಿಯಲ್ಲಿ ಮಂಗಳವಾರ(ನ.03) ರಾತ್ರಿ ಟಿಪ್ಪರ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ನಡೆದಿದೆ. ಪರಿಣಾಮ ಬೈಕ್ ಸವಾರ ಮೃತಪಟ್ಟಿದ್ದಾರೆ.

 

ಉಪ್ಪಿನಂಗಡಿ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿ ಪರಿಯಡ್ಕ ಎಂಬಲ್ಲಿ ಮಂಗಳವಾರ ರಾತ್ರಿ ಭೀಕಾರವಾಗಿ ಅಪಘಾತ ಸಂಭವಿಸಿದೆ. ಪರಿಣಾಮ ಬೈಕ್ ಸವಾರ ಬಜತ್ತೂರು ಗ್ರಾಮದ ನಿವಾಸಿ ನಾಗೋಜಿಯ ನಾರಯಣ ಗೌಡ (44)ಎಂಬುವರು ಅಪಘಾತದ ರಭಸಕ್ಕೆ ಸ್ಥಳದಲ್ಲೇ ಮೃತ ಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಪುತ್ತೂರು ಸಂಚಾಋಇ ಠಾಣೆ ಎಸ್ ಐ ರಾಮ ನಾಯ್ಕರವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಪ್ರಕರಣ ದಾಖಲಾಗಿದೆ.

Also Read  ಗೃಹರಕ್ಷಕ ಕ್ಷೇಮಾಭಿವೃದ್ದಿ ನಿಧಿಯಿಂದ ಸಹಾಯ ಧನ

error: Content is protected !!
Scroll to Top