ಕುಚುಕು ಗೆಳೆಯನ ಕತ್ತು ಕೊಯ್ದು ಕುಚುಕು.!

(ನ್ಯೂಸ್ ಕಡಬ) newskadaba.com ಮೈಸೂರು . 04: ಯುವಕನೊಬ್ಬ ತನ್ನ ಕುಚುಕು ಗೆಳೆಯನ ಕತ್ತು ಕೊಯ್ದು ಪರಾರಿಯಾಗಲು ಯತ್ನಿಸಿದ ಘಟನೆ ನಂಜನಗೂಡಿನ ತಾಂಡವಪುರದಲ್ಲಿ ನಡೆದಿದೆ. ಹಲ್ಲೆಗೆ ಒಳಗಾದವನನ್ನು ರೋಹನ್ ಎಂದು ಗುರುತಿಸಲಾಗಿದೆ. ಈತ ಗೆಳೆಯ ದಿಲ್ ಶಾದ್ ನಿಂದ ಮಾರಾಣಾಂತಿಕ ಹಲ್ಲೆಗೊಳಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾನೆ.

ರೋಹನ್ ಹಾಗೂ ದಿಲ್ ಶಾದ್ 5ನೇ ತರಗತಿಯಿಂದ ಗೆಳೆಯರು. ಸದ್ಯ ರೋಹನ್ ಮಂಗಳೂರಿನ ಆಳ್ವಾಸ್ ಕಾಲೇಜಿನಲ್ಲಿ ಎಂಜಿನಿಯರಿಂಗ್ ಮಾಡುತ್ತಿದ್ದರೆ, ದಿಲ್ ಶಾದ್ ಮೈಸೂರಿನ ಕಾಲೇಜೊಂದರಲ್ಲಿ ಎಂಜಿನಿಯರಿಂಗ್ ಓದುತ್ತಿದ್ದಾನೆ.ಮಂಗಳವಾರ ರಾತ್ರಿ ಇಬ್ಬರೂ ರೋಹನ್ ಮನೆಯಲ್ಲಿ ಲ್ಯಾಪ್ ಟಾಪ್ ನೋಡುತ್ತಿದ್ದರು. ಈ ವೇಳೆ ಇದ್ದಕ್ಕಿದ್ದಂತೆ ದಿಲ್ ಶಾದ್, ರಾಹುಲ್ ಕುತ್ತಿಗೆಯನ್ನ ಚಾಕುವಿನಿಂದ ಕೊಯ್ದಿದ್ದಾನೆ. ಗೆಳೆಯನನ್ನ ಇರಿದು ಬಳಿಕ ಓಡಿ ಹೋಗಲು ಯತ್ನಿಸಿದ್ದಾನೆ. ಈ ವೇಳೆ ಸ್ಥಳೀಯರು ಹಿಡಿದು ಥಳಿಸಿದ್ದಾರೆ. ನಂತರ ಪೊಲೀಸರಿಗೆ ಒಪ್ಪಿಸಿದ್ದಾರೆ.ಇನ್ನು ಈ ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.ಈ ಸಂಬಂಧ ನಂಜನಗೂಡು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

 

 

error: Content is protected !!

Join the Group

Join WhatsApp Group