ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ► ಇಂದು ಮಂಗಳೂರಿಗೆ ಭೇಟಿ

 (ನ್ಯೂಸ್ ಕಡಬ) newskadaba.com  ಮಂಗಳೂರು,ಅ.02. ದಕ್ಷಿಣ ಕನ್ನಡ ಜಿಲ್ಲೆಯ 8 ಕ್ಷೇತ್ರಗಳ ಪೈಕಿ 7 ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರು ಇದ್ದಾರೆ. ಹೀಗಾಗಿ ಈ ಕ್ಷೇತ್ರಗಳನ್ನು ಹೊಡೆದುರುಳಿಸಲು ಬಿಜೆಪಿ ಚಾಣಾಕ್ಷ ಅಮಿತ್ ಶಾ ಇಂದು ಮಂಗಳೂರಿಗೆ ಭೇಟಿ ನೀಡಲಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆ ಬಿಜೆಪಿಯ ಭದ್ರಕೋಟೆ ಮಾತ್ರವಲ್ಲ, ಆರ್‍ಎಸ್‍ಎಸ್, ಹಿಂದೂ ಸಂಘಟನೆಗಳಿಂದ ಬಲಶಾಲಿಯಾಗಿದೆ. ಜಿಲ್ಲೆಯ 8 ಕ್ಷೇತ್ರಗಳ ಪೈಕಿ ಒಂದು ಕ್ಷೇತ್ರದಲ್ಲಿ ಮಾತ್ರ ಬಿಜೆಪಿ ಶಾಸಕರಿದ್ದಾರೆ. ಈ ಬಾರಿ ಚುನಾವಣೆಯಲ್ಲಿ ಬಿಜೆಪಿಯು ಅತೀ ಹೆಚ್ಚು ಶಾಸಕ ಸ್ಥಾನಗಳನ್ನು ಪಡೆಯಬೇಕೆಂದು ಬಿಜೆಪಿ ಶತಪ್ರಯತ್ನ ಪಡುತ್ತಿದೆ.

ಬಿಜೆಪಿಯ ಹೈಕಮಾಂಡ್ ಈ ಬಾರಿ ಸ್ವತಃ ರಣರಂಗಕ್ಕೆ ಇಳಿಯಲು ತಯಾರಿ ನಡೆಸಿದೆ. ಅದರ ಮೊದಲ ಪ್ರಯತ್ನವಾಗಿ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮಂಗಳೂರಿಗೆ ಇಂದು ಆಗಮಿಸುತ್ತಿದ್ದಾರೆ.

ಅಕ್ಟೋಬರ್ 4ರ ತನಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಮಿತ್ ಶಾ ಪ್ರವಾಸ ಮಾಡಲಿದ್ದಾರೆ. ಅಕ್ಟೋಬರ್ 4 ರಂದು ಇಡೀ ದಿನ ಮಂಗಳೂರಿನಲ್ಲಿ ಪಕ್ಷ ಸಂಘಟನೆ ಹಾಗೂ ಇತರ ವಿಷಯಗಳ ಬಗ್ಗೆ ರಾಜ್ಯ ನಾಯಕರ ಜೊತೆ ಚರ್ಚೆ ನಡೆಸಲಿದ್ದಾರೆ.

error: Content is protected !!

Join the Group

Join WhatsApp Group