(ನ್ಯೂಸ್ ಕಡಬ) newskadaba.com ಹೊಸನಗರ,ಅ.02, ಎರಡು ಖಾಸಗಿ ಬಸ್ ಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಪ್ರಯಾಣಿಕರಿಗೆ ಗಾಯಗಳು ಆಗಿರುವ ಘಟನೆ ತಾಲೂಕಿನ ಹನಿಯಾ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಸಂಜೆ ಸಂಭವಿಸಿದೆ.

ಕುಂದಾಪುರದಿಂದ ಶಿವಮೊಗ್ಗ ದತ್ತ ಸಾಗುತ್ತಿದ್ದ ಹನುಮಾನ್ ಕಂಪನಿಯ ಬಸ್ ಹಾಗೂ ಹೊಸನಗರ ಕಡೆಯಿಂದ ಕುಂದಾಪುರಕ್ಕೆ ತೆರಳುತ್ತಿದ್ದ ದುರ್ಗಾಂಬ ಬಸ್ಸುಗಳು ಮುಖಾಮುಖಿ ಡಿಕ್ಕಿ ಹೊಡೆದಿವೆ. ಡಿಕ್ಕಿಯ ರಭಸಕ್ಕೆ ಬಸ್ಸುಗಳ ಮುಂಬಾಗ ನಜ್ಜುಗುಜ್ಜಾಗಿದೆ. ಬಸ್ ಗಳ ಚಾಲಕರಿಗೆ ಹಾಗೂ 5 ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ. 20 ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಹಾಗೂ ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.












