ವಿಟ್ಲ :ಕಾಲು ಮುರಿತಕ್ಕೊಳಗಾಗಿದ್ದ ಮಹಿಳೆಗೆ ಶ್ರೀ ವೀರಾಂಜನೇಯ ಸಮಿತಿಯಿಂದ ಸಹಾಯಧನ

(ನ್ಯೂಸ್ ಕಡಬ) newskadaba.com ವಿಟ್ಲ . 07: ಬಂಟ್ವಾಳ ತಾಲೂಕಿನ ವಿಟ್ಲ ಶೋಭಾರವರು ಜಾರಿಬಿದ್ದು ಕಾಲು ಮುರಿತಕ್ಕೊಳಗಾಗಿ ತೀರಾ ಸಂಕಷ್ಟದಲ್ಲಿದ್ದು ಅವರ ಚಿಕಿತ್ಸೆಗೆ ಶ್ರೀ ವೀರಾಂಜನೇಯ ಸೇವಾ ಸಮಿತಿ ವತಿಯಿಂದ ರೂ 15ಸಾವಿರ ಸಹಾಯಧನವನ್ನು ಹಸ್ತಾಂತರಿಸಿದರು.

 

ಇವರು ವಿದ್ಯಾದಾನ ಮತ್ತು ಬಡವರ ಸೇವೇಯೇ ನಮ್ಮಧ್ಯೇಯ ಎಂಬ ಪರಿಕಲ್ಪನೆಯೊಂದಿಗೆ ಕಳೆದ ಮೂರು ವರ್ಷಗಳ ಹಿಂದೆ ರಚನೆಯಾದ ಶ್ರೀ ವೀರಾಂಜನೇಯ ಸೇವಾ ಸಮಿತಿ ವತಿಯಿಂದ ಈಗಾಗಲೇ ಹಲವಾರು ಕುಟುಂಬಗಳಿಗೆ ಸಹಾಯ ಹಸ್ತ ನೀಡಿದ್ದಾರೆ. ಇನ್ನು ಈ ಸಂರ್ಭದಲ್ಲಿ ಶ್ರೀ ವೀರಾಂಜನೇಯ ಸೇವಾ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Also Read  ಉಪ್ಪಿನಂಗಡಿ: ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯ ಕಬ್ ಶಿಕ್ಷಕ ಪುರುಷೋತ್ತಮ ಗೌಡ ನಿಧನ

 

 

error: Content is protected !!
Scroll to Top