ಕುಕ್ಕೆ ಚಂಪಾ ಷಷ್ಠಿ ಜಾತ್ರೋತ್ಸವ ➤ ಶೀಘ್ರವೇ ಜಿಲ್ಲಾಮಟ್ಟದ ಸಭೆ: ಸಚಿವ ಕೋಟ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ . 09 : ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಈ ಬಾರಿ ಚಂಪಾ ಷಷ್ಠಿ ಜಾತ್ರಾ ಮಹೋತ್ಸವ ನಡೆಸುವ ಬಗ್ಗೆ ಚರ್ಚಿಸಲು ಶೀಘ್ರವೇ ಜಿಲ್ಲಾಮಟ್ಟದ ಸಭೆ ನಡೆಸಲಾಗುವುದು. ಈ ಸಭೆಯಲ್ಲಿ ಜಾತ್ರೋತ್ಸವ ನಡೆಸುವ ಕುರಿತು ಸಮಗ್ರ ಚರ್ಚೆ ನಡೆಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

 

 

ಕೋವಿಡ್‌-19 ಗಮನದಲ್ಲಿಟ್ಟುಕೊಂಡು, ಅದರ ಮುಂಜಾಗ್ರತಾ ನಿಯಮ ಪಾಲಿಸಿಕೊಂಡು ಸುಬ್ರಹ್ಮಣ್ಯದಲ್ಲಿ ಚಂಪಾ ಷಷ್ಠಿ ನಡೆಸುವ ಬಗ್ಗೆ ಚರ್ಚಿಸಲು ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿ, ಸಂಬಂಧಪಟ್ಟ ಅಧಿಕಾರಿಗಳ ಉಪಸ್ಥಿತಿಯಲ್ಲಿ ವಾರಾಂತ್ಯ ಸಭೆ ನಡೆಯಲಿದೆ. ಎಲ್ಲ ಸಾಧಕ, ಬಾಧಕಗಳನ್ನು ಗಮನದಲ್ಲಿಟ್ಟುಕೊಂಡು ಚಂಪಾ ಷಷ್ಠಿ ನಡೆಸಲು ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

 

 

error: Content is protected !!

Join the Group

Join WhatsApp Group