ಹರಿಹರ ಪಲ್ಲತಡ್ಕ: ರಸ್ತೆ ಕಾಂಕ್ರೀಟ್ ಕಾರ್ಯ

(ನ್ಯೂಸ್ ಕಡಬ) newskadaba.com ಹರಿಹರ ಪಲ್ಲತಡ್ಕ.11: ಮಳೆ ಹಾನಿ ಯೋಜನೆಯಡಿಯಲ್ಲಿ ಮಂಜೂರಾದ 45 ಲಕ್ಷ ಅನುದಾನದಲ್ಲಿ 815 ಮೀಟರ್ ರಸ್ತೆ ಕಾಂಕ್ರೀಟ್ ಕಾರ್ಯವು ಬಾಳುಗೋಡು -ಹರಿಹರ ಸಂಪರ್ಕ ರಸ್ತೆಯ ಕಲ್ಲೆಮಠ ಎಂಬಲ್ಲಿ ಭರದಿಂದ ಸಾಗುತ್ತಿದೆ.

 

 

ಈ ಸಂದರ್ಭದಲ್ಲಿ ತಾಲೂಕು ಲೋಕೋಪಯೋಗಿ ಇಲಾಖೆಯ ಜೂನಿಯರ್ ಇಂಜಿನಿಯರ್ ಜನಾರ್ಧನ ರವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಹಾಗೆಯೇ ಪಲ್ಲತಡ್ಕ ಗ್ರಾ.ಪಂ. ನ ಮಾಜಿ ಅಧ್ಯಕ್ಷರಾದ ಚಂದ್ರಹಾಸ ಶಿವಾಲ, ಶಿವಕುಮಾರ್ ಶಿವಾಲ, ಗುತ್ತಿಗೆದಾರರ ಉಸ್ತುವಾರಿ ಯಾಹ್ಯಾ ಉಪಸ್ಥಿತರಿದ್ದರು.

 

 

error: Content is protected !!

Join the Group

Join WhatsApp Group