ಉಳ್ಳಾಲ: ಕಳವುಗೈದ ಪಿಕಪ್ ವಾಹನ ಮತ್ತು ಆರೋಪಿ ಪೊಲೀಸರ ವಶಕ್ಕೆ

(ನ್ಯೂಸ್ ಕಡಬ) newskadaba.com ಉಳ್ಳಾಲ.13: ತೊಕ್ಕೊಟ್ಟುವಿನ ಕಲ್ಲಾಪುವಿನಿಂದ  ಪಿಕಪ್ ವಾಹನವನ್ನು ಕಳ್ಳನೋರ್ವ ಕದ್ದೊಯ್ದಿದ್ದಾನೆ. ಕಳವು ಮಾಡಿದ ಈ ವಾಹನವು ಸುರತ್ಕಲ್ ಠಾಣಾ ವ್ಯಾಪ್ತಿಯ ಚೇಳ್ಯಾರು ಬಳಿ ಮನೆಯ ಕಂಪೌಂಡಿಗೆ ಢಿಕ್ಕಿ ಹೊಡೆದಿದ್ದು, ಸುರತ್ಕಲ್ ಪೊಲೀಸರು ಕಳೆದ ದಿನ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಯನ್ನು  ತಮಿಳುನಾಡು ಮೂಲದ ದಕ್ಷಿಣಮೂರ್ತಿ ಎಂದು ಗುರುತಿಸಲಾಗಿದೆ.  ತೊಕ್ಕೊಟ್ಟು ಕಲ್ಲಾಪು ಬಳಿಯಿರುವ ಸೂಪರ್ ಬಜಾರ್ ಎದುರು ನಿಲ್ಲಿಸಿದ್ದ ಪಿಕಪ್ ವಾಹನವನ್ನು ದಕ್ಷಿಣಮೂರ್ತಿಯವರು ಮಧ್ಯರಾತ್ರಿ ವೇಳೆ ಕಳವು ಮಾಡಿದ್ದಾರೆ. ಕಳವು ನಡೆಸಿದ ವಾಹನವನ್ನು ಕೊಂಡೊಯ್ಯುವ ಸಂದರ್ಭ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಚೇಳ್ಯಾರು ಎಂಬಲ್ಲಿ ಮನೆಯೊಂದರ ಕಂಪೌಂಡಿಗೆ ಢಿಕ್ಕಿ ಹೊಡೆದು ನಂತರ ವಿದ್ಯುತ್ ಕಂಬಕ್ಕೆ ಪಿಕಪ್ ವಾಹನ ಢಿಕ್ಕಿ ಹೊಡೆದಿದೆ. ಕೂಡಲೇ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸುರತ್ಕಲ್ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

Also Read  ಮೇವು ಕತ್ತರಿಸುವ ಯಂತ್ರಕ್ಕೆ ಪಶುಪಾಲಕರಿಂದ ಅರ್ಜಿ ಆಹ್ವಾನ

 

error: Content is protected !!
Scroll to Top