ಏಳನೇ ಬಾರಿಗೆ ಮತ್ತೆ ಬಿಹಾರ ಸಿಎಂ ಪಟ್ಟ ಅಲಂಕರಿಸಿದ ನಿತೀಶ್​ ಕುಮಾರ್​

(ನ್ಯೂಸ್ ಕಡಬ) newskadaba.com ಬಿಹಾರ ನ. 15: ಬಿಹಾರ ಮುಖ್ಯಮಂತ್ರಿ ಪಟ್ಟಕ್ಕೆ ನಿತೀಶ್​ಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ. ಬಹಳ ಕುತೂಹಲ ಕೆರಳಿಸಿದ್ದ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಎನ್​ಡಿಎ ಸರ್ಕಾರಕ್ಕೆ ಅಧಿಕಾರ ಸಿಕ್ಕಿದ್ದು, ನಿತೀಶ್​ ಕುಮಾರ್​ಗೆ ಮತ್ತೆ ಸಿಎಂ ಪಟ್ಟ ಕಟ್ಟಲು ಎನ್​ಡಿಎ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.ಇಂದು ನಡೆದ ಎನ್​ಡಿಎ ಸಭೆಯಲ್ಲಿ ಬಿಹಾರ ಸಿಎಂ ಸ್ಥಾನಕ್ಕೆ ನಿತೀಶ್​ ಕುಮಾರ್​ ಅವರನ್ನು ಆಯ್ಕೆ ಮಾಡಲಾಗಿದೆ.

 

ಜೆಡಿಯು ಕಡಿಮೆ ಸ್ಥಾನ ಗೆದ್ದರೂ ನಿತೀಶ್​ಗೆ ನಾಲ್ಕನೇ ಬಾರಿ ಮುಖ್ಯಮಂತ್ರಿ ಆಗುವ ಅವಕಾಶ ಒಲಿದಿದೆ.ಜಿದ್ದಾಜಿದ್ದಿನ ಹೋರಾಟದಲ್ಲಿ ಮಹಾಘಟಬಂಧನ್​ ವಿರುದ್ಧ ಎನ್​ಡಿಎ(ಬಿಜೆಪಿ, ಜೆಡಿಯು, ಎಚ್​ಎಎಂ ಹಾಗೂ ವಿಐಪಿ ಪಕ್ಷಗಳು) ಸ್ಪಷ್ಟ ಬಹುಮತ ಪಡೆದಿದೆ. ಪ್ರತಿ ಹಂತದಲ್ಲೂ ಕುತೂಹಲ ಸೃಷ್ಟಿಸಿದ್ದ ಪೈಪೋಟಿಯಲ್ಲಿ ಎನ್‍ಡಿಎಗೆ ರೋಚಕ ಗೆಲುವು ಸಿಕ್ಕಿದೆ. ಶುಕ್ರವಾರವಷ್ಟೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ನಿತೀಶ್​ಕುಮಾರ್​, ಹೊಸ ಎನ್​ಡಿಎ ಸರ್ಕಾರ ಆಡಳಿತ ಚುಕ್ಕಾಣಿ ಹಿಡಿಯುವ ತನಕ ಹಂಗಾಮಿ ಮುಖ್ಯಮಂತ್ರಿಯಾಗಿ ಮುಂದುವರಿದಿದ್ದರು.ಇದೀಗ ಎನ್​ಡಿಎ ಸಭೆಯಲ್ಲಿ ಮುಖ್ಯಮಂತ್ರಿ ಯಾರೆಂಬ ನಿರ್ಣಯ ಹೊರಬಿದ್ದಿದ್ದು, ನಿತೀಶ್​ ಅವರಿಗೆ ಸಿಎಂ ಗಾದಿ ಒಲಿದಿದೆ.

 

 

 

error: Content is protected !!

Join the Group

Join WhatsApp Group