ಆ್ಯಂಕರ್ ಅನುಶ್ರೀ ವಿಚಾರಣೆ ನಡೆಸಿದ್ದ ಸಿಸಿಬಿ ಇನ್ಸ್‍ಪೆಕ್ಟರ್ ವರ್ಗಾವಣೆ

(ನ್ಯೂಸ್ ಕಡಬ) newskadaba.com ಮಂಗಳೂರು . 17: ಮಾದಕ ದ್ರವ್ಯ ಜಾಳದ ನಂಟಿನ ಆರೋಪದ ಹಿನ್ನಲೆಯಲ್ಲಿ ಖ್ಯಾತ ಆ್ಯಂಕರ್ ಅನುಶ್ರೀ ವಿಚಾರಣೆ ನಡೆಸಿದ್ದ ಸಿಸಿಬಿ ಇನ್ಸ್‍ಪೆಕ್ಟರ್ ಶಿವಪ್ರಕಾಶ್ ಅವರನ್ನು ವರ್ಗಾವಣೆ ಮಾಡಲಾಗಿದೆ.

 

ಈ ಹಿಂದೆ ಅವರನನ್ನು ವರ್ಗಾವಣೆ ಮಾಡಿದ್ದಾಗ ವಿವಾದ ಸೃಷ್ಟಿಯಾಗಿತ್ತು. ಬಳಿಕ ಅದನ್ನು ರದ್ದು ಪಡಿಸಲಾಗಿತ್ತು. ಕಾಪು ಠಾಣೆಯ ಇನ್ಸ್‍ಪೆಕ್ಟರ್ ಮಹೇಶ್ ಪ್ರಸಾದ್ ಅವರನ್ನು ಸಿಸಿಬಿಯ ನೂತನ ಇನ್ಸ್‍ಪೆಕ್ಟರ್ ಆಗಿ ನಿಯೋಜಿಸಲಾಗಿದೆ. ಸಿಸಿಬಿ ಇನ್ಸ್‍ಪೆಕ್ಟರ್ ಕಬ್ಬಾಳ ರಾಜ್ ರವರನ್ನು ಚಿಕ್ಕಮಗಳೂರಿಗೆ ವರ್ಗಾವಣೆ ಮಾಡಲಾಘಿದೆ ಎಂದು ಮೂಲಗಳು ತಿಳಿಸಿವೆ.

Also Read  ಕುಕ್ಕೇ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ

 

 

error: Content is protected !!
Scroll to Top