ಮಂಗಳೂರು: “ನಂದಿನಿ ಆನ್ ವೀಲ್ಸ್ ಸಂಚಾರಿ” ವಾಹನಕ್ಕೆ ಚಾಲನೆ

(ನ್ಯೂಸ್ ಕಡಬ) newskadaba.com ಮಂಗಳೂರು . 18: ದ. ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿಯಮಿತ ಹಾಗೂ ದ.ಕ ಜಿಲ್ಲಾ ಸಹಕಾರಿ ಯೂನಿಯನ್ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ 67 ನೇ ಅಖಿಲ ಭಾರತ ಸಹಕಾರಿ ಸಪ್ತಾಹ ಕಾರ್ಯಕ್ರಮದ ಅಂಗವಾಗಿ ಕೋರೊನಾ ಸೋಂಕು_ ಅತ್ಮನಿರ್ಭರ ಭಾರತ,ಸಹಕಾರ ಸಂಸ್ಥೆಗಳು ಎಂಬ ಧ್ಯೇಯದೊಂದಿದೆ ವ್ಯವಹಾರ ಉದ್ಯೋಗ ಕಳೆದುಕೊಂಡವರು ,ಭಾದಿತರು ಪುನರುದ್ಯೋಗಸ್ಥರಾಗಲು ಕೌಶಲ್ಯಾಭಿವೃದ್ದಿ ದಿನಾಚರಣೆ ಕಾರ್ಯಕ್ರಮ ನಗರದ ಮಂಗಳೂರು ಡೇರಿ ಅವರಣದಲ್ಲಿ ನಡೆಯಿತು‌‌.

 

 

“ನಂದಿನಿ ಆನ್ ವೀಲ್ಸ್ ಸಂಚಾರಿ” ವಾಹನಕ್ಕೆ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಂಡಳಿಯ ನಿ.ಬೆಂಗಳೂರು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷರಾದ ಡಾ.ಎಂ ಎನ್ ರಾಜೇಂದ್ರ ಕುಮಾರ್ ಅವರು ವಾಹನಕ್ಕೆ ಹಸಿರು ನಿಶಾನೆ ತೋರುವುದರ ಮೂಲಕ ಚಾಲನೆ ನೀಡಿದರು. ಇನ್ನೂ ಈ ಕಾರ್ಯಕ್ರಮದಲ್ಲಿ ದ.ಕ ಜಿಲ್ಲಾ ಹಾಲು ಉತ್ಪಾದಕ ಒಕ್ಕೂಟದ ಅಧ್ಯಕ್ಷರ ರವಿರಾಜ ಹೆಗ್ಡೆ. ಕ್ಯಾಂಪ್ಕೋ ಅಧ್ಯಕ್ಷ ಎಸ್.ಎರ್.ಸತೀಶ್ಚಂದ್ರ.ದ.ಕ ಹಾಲು ಉತ್ಪಾದಕ ಒಕ್ಕೂಟದ ಉಪಾಧ್ಯಕ್ಷ ಶ್ರೀ ಪ್ರಕಾಶ್ಚಂದ್ರ ಶೆಟ್ಟಿ ಇನ್ನಿತರರು ಉಪಸ್ಥಿತರಿದ್ದರು.

 

Also Read  ಟಾಟಾ ಸನ್ಸ್‌ನ ಮಾಜಿ ನಿರ್ದೇಶಕ ಆರ್‌. ಕೃಷ್ಣಕುಮಾರ್ ವಿಧಿವಶ

 

 

 

error: Content is protected !!
Scroll to Top